ಮನೆ ಕಾನೂನು ಲೋಕಾಯುಕ್ತ ಬಲೆಗೆ ಬಿದ್ದ ತಾಲ್ಲೂಕು ಕಚೇರಿ ನೌಕರ

ಲೋಕಾಯುಕ್ತ ಬಲೆಗೆ ಬಿದ್ದ ತಾಲ್ಲೂಕು ಕಚೇರಿ ನೌಕರ

0

ಮಂಡ್ಯ:ತಹಶೀಲ್ದಾ‌ರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ರೈತರೊಬ್ಬರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿ ಅವರನ್ನು ವಶಕ್ಕೆ ಪಡೆಯಲಾಗಿದೆ.

Join Our Whatsapp Group


ಮರಕಾಡುದೊಡ್ಡಿ ಗ್ರಾಮದ ಮೋಹನ್ ಎಂಬುವವರಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು,10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಿಪಿಐ ಬ್ಯಾಟರಾಯಗೌಡರ ನೇತೃತ್ವದ ತಂಡ ಬುಧವಾರ ದಾಳಿ ನಡೆಸಿ,ತಿಪ್ಪೇಸ್ವಾಮಿಯನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.