ಮನೆ ರಾಜಕೀಯ ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿಗೆ ತಮಿಳುನಾಡು ಪತ್ರ ಕಾನೂನು ಬಾಹಿರ: ಸಿಎಂ ಬೊಮ್ಮಾಯಿ

ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿಗೆ ತಮಿಳುನಾಡು ಪತ್ರ ಕಾನೂನು ಬಾಹಿರ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಿಗೆ ತಮಿಳುನಾಡು ಮುಖ್ಯಮಂತ್ರಿ ಪತ್ರ ಬರೆದಿರುವುದು ಕಾನೂನುಬಾಹಿರ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನೀರಿನ ಹಕ್ಕಿನ ಮೇಲೆ ಅವರು ದಬ್ಬಾಳಿಕೆ ಮಾಡುವ ಹುನ್ನಾರ ನಡೆಸಿದ್ದು, ಅವರ ಬೇಡಿಕೆಯನ್ನು ಕೇಂದ್ರ ಪರಿಗಣಿಸಬಾರದು. ನಮಗೆ ನ್ಯಾಯ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದರು.

ಮೇಕೆದಾಟು ಯೋಜನೆ ಬಗ್ಗೆ ಕಾವೇರಿ ನದಿ ನಿರ್ವಹಣಾ ಮಂಡಳಿಯಲ್ಲಿ ಡಿಪಿಆರ್ ಅಪ್ರೂಪ್ ಮಾಡಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ. ಅದೇ ರೀತಿ, ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯಲ್ಲಿ ಹಲವಾರು ಸಭೆ ಆಗಿವೆ, ಸದ್ಯದಲ್ಲೇ ಅಂತಿಮ ಸಭೆ ಬರುತ್ತದೆ.ಈಗ ತಮಿಳುನಾಡು ಕ್ಯಾತೆ ತೆಗೆದಿದೆ. ಪ್ರಧಾನಿಗೆ ಪತ್ರ ಬರೆದಿದ್ದಾರೆ ಎನ್ನುವ ಸುದ್ದಿ ಬಂದಿದೆ. ಆ ಪತ್ರವನ್ನು ತರಿಸಿಕೊಳ್ಳುತ್ತೇನೆ. ಅವರ ಬೇಡಿಕೆ ಕಾನೂನುಬಾಹಿರ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಮತ್ತು ನಮ್ಮ ನೀರಿನ ಹಕ್ಕಿನ ಮೇಲೆ ಅವರು ದಬ್ಬಾಳಿಕೆ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು‌.

ಸಿಎಂ ಬೊಮ್ಮಾಯಿತಮಿಳುನಾಡಿನ ನೀರಿನ ಹಕ್ಕಿನ ಮೇಲೆ ನಾವು ಈ ಯೋಜನೆಯನ್ನ ಮಾಡಿಲ್ಲ. ನಮ್ಮ ಪಾಲಿನ ನೀರಿನ ಹಕ್ಕಿನ ಅಡಿ ನಾವು ಮೇಕೆದಾಟು ಮಾಡುತ್ತಿದ್ದೇವೆ, ನಮ್ಮ ರಾಜ್ಯದಲ್ಲಿಯೇ ಮಾಡುತ್ತಿದ್ದೇವೆ ಮತ್ತು ಈಗಾಗಲೇ ಸಾಕಷ್ಟು ಪ್ರಕ್ರಿಯೆ ಮುಗಿದು ಅಂತಿಮ ಹಂತಕ್ಕೆ ಬಂದಿದೆ. 15 ಸಭೆಗಳು ನಡೆದಿವೆ. ಇಲ್ಲಿಯವರೆಗೂ ಯಾವುದೇ ಆಕ್ಷೇಪಣೆ ವ್ಯಕ್ತಪಡಿಸಿಲ್ಲ. ಈಗ ರಾಜಕೀಯ ಗಿಮಿಕ್ ರಾಜಕೀಯ ಮಾಡುತ್ತಿದ್ದಾರೆ ಎಂದರು.

ಜೂನ್ 16 ರಂದು ಮೇಕೆದಾಟು ಯೋಜನೆ ಕುರಿತು ಸಭೆ ನಡೆಯಲಿದೆ, ಅದಕ್ಕೆ ನಮ್ಮ ಅಧಿಕಾರಿಗಳು ಹೋಗಲಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದರು.

ಹಿಂದಿನ ಲೇಖನಮಾಜಿ ಆಟಗಾರರು, ಅಂಪೈರ್ ಗಳ ಪಿಂಚಣಿ ಹೆಚ್ಚಿಸಿದ ಬಿಸಿಸಿಐ
ಮುಂದಿನ ಲೇಖನಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳ ಭರ್ತಿಗೆ ಪ್ರಧಾನಿ ಮೋದಿ ಸೂಚನೆ