ಮನೆ ರಾಜಕೀಯ ” ತನು- ಮನ-ಧನ” – ನೋಟಿಗಾಗಿ ನಿಮ್ಮ ಸ್ಪರ್ಧೆ: ಪ್ರಮೋದ್ ಮುತಾಲಿಕ್’ಗೆ ತಿರುಗೇಟು ನೀಡಿದ ಸುನೀಲ್...

” ತನು- ಮನ-ಧನ” – ನೋಟಿಗಾಗಿ ನಿಮ್ಮ ಸ್ಪರ್ಧೆ: ಪ್ರಮೋದ್ ಮುತಾಲಿಕ್’ಗೆ ತಿರುಗೇಟು ನೀಡಿದ ಸುನೀಲ್ ಕುಮಾರ್

0

ಬೆಂಗಳೂರು: ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ” ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ ಎಂದು ಪ್ರಮೋದ್ ಮುತಾಲಿಕ್’ಗೆ ಸಚಿವ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.

ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂಬ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ, ಸಚಿವ ಸುನಿಲ್ ಕುಮಾರ್, ‘ನಮ್ಮ ಅನುಮಾನವೀಗ ನಿಜವಾಗಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ. ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ ಎಂದಿದ್ದಾರೆ.

ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ. ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ‘ವೋಟು, ನೋಟು’ ಹೇಳಿಕೆಯ ಮೂಲಕ ತಿಳಿಸಿದ್ದಿರಿ ಎಂದು ಹೇಳಿದ್ದಾರೆ.

ಹಿಂದಿನ ಲೇಖನವಸಿಷ್ಠೋಪಾಖ್ಯಾನ
ಮುಂದಿನ ಲೇಖನಜಮ್ಮು-ಕಾಶ್ಮೀರ ಕ್ಷೇತ್ರಗಳ ಮರುವಿನ್ಯಾಸ ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಜಾಗೊಳಿಸಿದ ಸುಪ್ರೀಂಕೋರ್ಟ್