ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಟಾಟಾ ಏಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬರು ಮೃತಪಟ್ಟಿದ್ದು, ಆಕೆಯ ಜತೆಯಲ್ಲಿದ್ದ ಸ್ನೇಹಿತ ಗಾಯಗೊಂಡಿರುವ ದಾರುಣ ಘಟನೆ ಬುಧವಾರ ಮುಂಜಾನೆ ಹಳೆ ಮದ್ರಾಸ್ ರಸ್ತೆಯಲ್ಲಿ ನಡೆದಿದೆ.
ಕೋರಮಂಗಲದ ಬಿ. ಶಾಲಿನಿ ಮೃತಪಟ್ಟವರು.
ಜೆ. ಪಿ. ನಗರದ ‘ಸ್ಪಾ’ವೊಂದರಲ್ಲಿ ರಿಸೆಪ್ಶನಿಸ್ಟ್ ಆಗಿದ್ದ ಶಾಲಿನಿ, ಮಂಗಳವಾರ ರಾತ್ರಿ ಸ್ನೇಹಿತ ಅಲನ್ ಸ್ಮಿತ್ ಜತೆ ಕೆ. ಆರ್. ಪುರಕ್ಕೆ ಹೋಗಿದ್ದರು. ಮುಂಜಾನೆ 3.30ರ ಸುಮಾರಿಗೆ ಹಳೆ ಮದ್ರಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಇಬ್ಬರು ವಾಪಸ್ ಬರುತ್ತಿದ್ದು, ಶಾಲಿನಿ ವಾಹನ ಚಲಾಯಿಸುತ್ತಿದ್ದರು.
ಮಾರ್ಗ ಮಧ್ಯೆ ಹ್ಯಾಂಗಿಂಗ್ ಬ್ರಿಡ್ಜ್ ಬಳಿ ಹಿಂದೆ ಬರುತ್ತಿದ್ದ ಟಾಟಾ ಏಸ್ ವಾಹನದ ಚಾಲಕ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಶಾಲಿನಿ, ಅಲನ್ ಇಬ್ಬರೂ ರಸ್ತೆ ಮೇಲೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶಾಲಿನಿಯನ್ನು ಸ್ಥಳೀಯರ ನೆರವಿನೊಂದಿಗೆ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟರು ಎಂದು ಕೆ. ಆರ್. ಪುರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.
ಶಾಲಿನಿ ಅವರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಅಪಘಾತ ಸಂಬಂಧ ಅವರ ತಂದೆ ಟಾಟಾ ಏಸ್ ವಾಹನ ಚಾಲಕನ ವಿರುದ್ಧ ದೂರು ನೀಡಿದ್ದಾರೆ. ಅಪಘಾತದ ಬಳಿಕ ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ವಾಹನದ ನಂಬರ್ ಆಧರಿಸಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.