ಮನೆ ರಾಜ್ಯ ತೆರಿಗೆ ವಂಚನೆ: ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿ

ತೆರಿಗೆ ವಂಚನೆ: ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿ

0

ಬೆಂಗಳೂರು: ತೆರಿಗೆ ವಂಚನೆ ಸಂಬಂಧ ಇಂದು (ಅ.12) ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ.

ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.

ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಐಟಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ.

ಈ ಹಿಂದೆ ದಾಳಿ ಮಾಡಿದ್ದ ವೇಳೆ ಚಿನ್ನದ ವ್ಯಾಪಾರಿಗಳ ಜೊತೆ ಕಾಫಿ ಬೋರ್ಡ್ ನಿರ್ದೇಶಕ ವ್ಯವಹಾರ ನಡೆಸಿರುವ ದಾಖಲೆಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದು ಐಟಿ ಅಧಿಕಾರಿಗಳು ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಹಿಂದಿನ ಲೇಖನಭಾರತೀಯ ಮಸಾಲೆ ಮಂಡಳಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ