ಶಿರಸಿ: ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾದ ಕಾಂಗ್ರೆಸ್ ಪಕ್ಷವು ಎಡಪಂಥೀಯ ‘ಕೈ’ ಗೊಂಬೆಯಾಗಿದೆ. ದೇಶದ ನೈಜ ಸ್ಥಿತಿ ತಿಳಿಸುವ ಸಂಗತಿ ಪಠ್ಯ ಪುಸ್ತಕದಲ್ಲಿ ಇದೆ. ಆದರೆ ಈಗ ಸ್ವತಃ ಮುಖ್ಯಮಂತ್ರಿಗಳು ಎಡ ಪಂಥಿಯ ವಿಚಾರ ಧಾರೆಯ ಕೈಗೊಂಬೆ ಆಗಿದ್ದಾರೆ. ಅದರ ಪರಿಣಾಮ ಪಠ್ಯ ಪರಿಷ್ಕರಣೆಯ ಆತುರವಾಗಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಅವರು ಜೂ.12ರ ಸೋಮವಾರ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಶಿಕ್ಷಣದ ವಿಷಯದಲ್ಲಿ ಮಕ್ಕಳ, ಶಿಕ್ಷಕರ, ಪಾಲಕರ ನಡುವೆ ಆತಂಕ ಮಾಡಬಾರದು ಎಂದ ಅವರು, ಈಗ ಪುಸ್ತಕ ಪೂರ್ಣವಾಗಿ ಬಂದಿದೆ. ಗೊಂದಲ ಗೂಡು ಶಿಕ್ಷಣ ಇಲಾಖೆ ಮಾಡಬಾರದು. ಕೆಲವರು ಬರೆದಿದ್ದಾರೆ ಎಂಬ ಕಾರಣಕ್ಕೆ ತೆಗೆಯುತ್ತಿದ್ದಾರೆ ಎಂದೂ ಹೇಳಿದರು.
ಟಿಪ್ಪುವೇ ಚೆಂದ ಕಾಣುವವರಿಗೆ ಭಾರತೀಯ ಇತಿಹಾಸ ಹೇಗೆ ಚೆಂದ ಕಾಣುತ್ತಾನೆ? ಸರಕಾರದ ಈ ನಿಲುವು ಖಂಡಿಸುತ್ತೇನೆ ಎಂದರು.
ಇತಿಹಾಸಕ್ಕೆ ಹಲವು ದೃಷ್ಟಿಯಿದೆ. ಆದರೆ, ಇತಿಹಾಸವನ್ನು ಭಾರತೀಯರಾಗಿ ಭಾರತೀಯ ದೃಷ್ಟಿಕೋನದಿಂದ ಶಿಕ್ಷಣ ಕಲಿಸಬೇಕಾಗಿದೆ. ಮೊಘಲರ, ಅಲೆಕ್ಸಾಂಡರ ದೃಷ್ಟಿಕೋನದಲ್ಲಿ ಕಲಿಸಬಾರದು. ಗುಲಾಮಿ ತನ ಮಾನಸಿಕತೆಯ ಶಿಕ್ಷಣಕ್ಕೆ ಖಂಡಿಸುತ್ತೇವೆ ಎಂದರು.
ಶಿಕ್ಷಣ ಪಠ್ಯದಲ್ಲಿ ಪೂರ್ವ ತಯಾರಿ ಇಲ್ಲದೇ ಬದಲಾವಣೆ ಸರಿಯಲ್ಲ. ಇದನ್ನು ಕೈ ಬಿಡಬೇಕು. ತನ್ನ ತನದ ಶಿಕ್ಷಣ ಕೊಡಬೇಕು. ನಿಲ್ಲಿಸದೇ ಹೋದರೆ ಸರಜಾರದ ವಿರುದ್ಧ ಹೋರಾಟ ರೂಪಿಸುತ್ತೇವೆ ಎಂದರು.
ಪಠ್ಯವು ಬೇರೆ ಬೇರೆ ಹಂತದಲ್ಲಿ ಪರಿಷ್ಕರಣೆ ಆಗಬೇಕು. ಪ್ರಜಾಪ್ರಭುತ್ವದ ಆಶಯಕ್ಕೆ ಇಂತಹ ನಿರ್ಣಯ ಸರಿಯಲ್ಲ. ಇವು ಕಾಂಗ್ರೆಸ್ ತಂತ್ರಗಾರಿಕೆಯಲ್ಲ, ಕುತಂತ್ರಗಾರಿಕೆಯಾಗಿದೆ ಎಂದೂ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಹೊಸತಾಗಿ ಆಯ್ಕೆ ಆಗಿದೆ. ಬೆಳೆವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೇ ಈ ಸರಕಾರದ ಪ್ರಾರಂಭಿಕ ದಿನಗಳು ರಾಜ್ಯದ ಜನರ ನಿರೀಕ್ಷೆ ಹುಸಿಗೊಳಿಸುತ್ತಿದೆ. ಸರಕಾರ ಗೊಂದಲದಲ್ಲಿದೆ. ಖಾತೆಯ ಬಗ್ಗೆ ಸಚಿವರು ತಿಳಿದುಕೊಳ್ಳುವ ಮೊದಲೇ ಗೊಂದಲದಲ್ಲಿ ಅವರೂ ಇದಾರೆ. ಗ್ಯಾರೆಂಟಿಗಳ ಗೊಂದಲದಲ್ಲಿ ಆಡಳಿತ ನಡೆಸುವದೇ ಆಗುತ್ತದಾ ಇಲ್ಲವಾ ಎಂಬುದು ಗೊತ್ತಾಗುತ್ತಿಲ್ಲ ಎಂದರು.
ಕಾಂಗ್ರೆಸ್ ಒಳ್ಳೆ ಆಡಳಿತ ನೀಡದೇ ಇದ್ದಾಗ ವಿವಾದ, ಗೊಂದಲ, ಸಮಸ್ಯೆ ಸೃಷ್ಟಿ ಮಾಡಿ ಗೊಂದಲ ಮಾಡುವದೇ ಕೆಲಸವಾಗಿದೆ. ಕಾಂಗ್ರೆಸ್ ಹಿಂದಿನ ನಿಲುವು ಮತ್ತೆ ಶುರು ಮಾಡಿದೆ ಎಂದರು.
ದ್ವೇಷ ರಾಜಕಾರಣದ ಮನಸ್ಥಿತಿ ಮಾಡುತ್ತಿದೆ. ರಾಜ್ಯದ ಹಲವಡೆ ಮಾಡುತ್ತಿದೆ. ದ್ವೇಷ ರಾಜಕಾರಣದಿಂದ ಸಂದೇಶ ಸಿಎಂ, ಡಿಸಿಎಂ ಅವರಿಂದಲೇ ಪಸರಿಸುತ್ತಿದೆ. ಇದು ಆತಂಕಕಾರಿ, ಅಪಾಯಕಾರಿ ವ್ಯವಸ್ಥೆ ಆಗಿದೆ ಎಂದರು.
ಹಿಂದಿನ ಬಿಜೆಪಿ ಸರಕಾರದಿಂದ ಮಂಜೂರಾದ ಅಭಿವೃದ್ದಿ ಗೆ ತಡೆ ಮಾಡಿದೆ. ಇದು ಅಭಿವೃದ್ದಿಗೆ ವಿರೋಧ ಎಂಬಂತೆ ಆಗಿದೆ ಎಂದ ಅವರು, ಬಿಜೆಪಿ ಮಂಜೂರಾದ ಕಾಮಗಾರಿ ಮುಂದುವರಿಸಬೇಕು. ಅಭಿವೃದ್ದಿಗೆ ಯಾವ ಸರಕಾರ ತಡೆ ಮಾಡಬಾರದು.
ಖಾತೆ ಸಮಯ ಆಗದೇ ಗೊಂದಲದಲ್ಲಿ ಇದೆ. ಇಲಾಖೆ ಜವಬ್ದಾರಿ ಕಾರ್ಯ ಮಾಡಬೇಕು ಎಂದರು.
ಈ ವೇಳೆ ರಾಜೇಶ ಶೆಟ್ಟಿ, ಉಷಾ ಹೆಗಡೆ, ನರಸಿಂಹ ಬಕ್ಕಳ, ಗುರುರಾಜ ಶಾಭಬಾಗ, ಮಾರುತಿ ನಾಯ್ಕ ಇದ್ದರು.
ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ರಕ್ತ ಪಿಪಾಸುಗಳು…
ಮಂತ್ರಿಯಾಗಿ ಪವನ್ ಕಲ್ಯಾಣ ಪ್ರಮಾಣವಚನ
ಮಾಧ್ಯಮ ರಂಗದ ಭೀಷ್ಮ ರಾಮೋಜಿ ರಾವ್ ನಿಧನ.!
ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪೈ.ಲಿ.ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆರ್ಜಿ ಆಹ್ವಾನ
ಡಿವೋಸ್ ಮೊರೆ ಹೋದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ!
PM ಮೋದಿಯವರು ಸಂವಿಧಾನ್ ಸದನ್ಗೆ ಆಗಮಿಸುತ್ತಿದ್ದಂತೆ ಮೋದಿ ಮೋದಿ ಘೋಷಣೆ
ಅವಕಾಶವಾದಿ ರಾಜಕಾರಣ ಮಾಡುವವರಿಗೆ ಜನ ಬುದ್ದಿ ಕಲಿಸಿದ್ದಾರೆ – ಸಾರಾ ಮಹೇಶ್
ಆದಾಯ ತೆರಿಗೆ ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಹುದ್ದೆ ನೇಮಕಾತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.