ಬೆಂಗಳೂರು: ನಗರದ ಶಿವಾಜಿನಗರದ ಆಜಾಂ ಮಸೀದಿಯಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಸೈಯದ್ ಮಹಮ್ಮದ್ ಅನ್ವರ್(37) ಬಂಧಿತ ಆರೋಪಿ.
ಜುಲೈ 4ರಂದು ಬೆಂಗಳೂರಿಗೆ ಬಂದಿದ್ದ ಸೈಯದ್ ಮಹಮ್ಮದ್ ಅನ್ವರ್, ಮದರಸಾ ಹೆಸರಿನಲ್ಲಿ ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದನು. ಹೀಗೆ ಶಿವಾಜಿನಗರದ ರಸೆಲ್ ಮಾರ್ಕೆಟ್ ಹಿಂದಿರುವ ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದಾನೆ. ಇದಕ್ಕೆ ಸಿಬ್ಬಂದಿ ಮಸೀದಿಯಲ್ಲಿ ಮಲಗಲು ಅವಕಾಶವಿಲ್ಲ ಎಂದಿದ್ದಾರೆ.
ಇದರಿಂದ ಬೇಸರಗೊಂಡು ಮೆಜೆಸ್ಟಿಕ್ ಗೆ ತೆರಳಿ ಕರ್ನೂಲ್ ಬಸ್ ಹತ್ತಿದ್ದಾನೆ. ಬಸ್ ದೇವನಹಳ್ಳಿ ದಾಟುತ್ತಿದ್ದಂತೆ 112ಗೆ ಕರೆ ಮಾಡಿದ್ದ ಸೈಯದ್ ಮಸೀದಿಯಲ್ಲಿ ಬಾಂಬ್ ಇಟ್ಟಿದ್ದಾರೆಂದು ಹುಸಿ ಕರೆ ಮಾಡಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದಾಗ ಬಾಂಬ್ ಇರಲಿಲ್ಲ. ಹುಸಿ ಬಾಂಬ್ ಕರೆಯಂದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಂತರ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆಂಧ್ರಕ್ಕೆ ತೆರಳಿದ್ದ ಆರೋಪಿ ಸೈಯದ್ ನನ್ನು ಶಿವಾಜಿನಗರ ಪೊಲೀಸರು ಕರ್ನೂಲ್ ನಿಂದ ತೆಲಂಗಾಣದ ಮೆಹಬೂಬ್ನಗರಕ್ಕೆ ತೆರಳಿದ್ದಾಗ ಬಂಧಿಸಿದ್ದಾರೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.