ಬೆಂಗಳೂರು: ರಾಜ್ಯದ ಕೆಲ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ಶಿವಾಜಿರಾವ್ ಎಂಬಾತನನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಶಿವಾಜಿರಾವ್ ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದು, ಸಿಸಿಬಿ ವಿಚಾರಣೆ ವೇಳೆ ಬೆದರಿಕೆ ಪತ್ರ ಬರೆದಿದ್ದು ಯಾಕೆ ಎಂಬುವುದನ್ನು ಬಾಯಿಬಿಟ್ಟಿದ್ದಾನೆ.
ಕೆಲ ಸಾಹಿತಿಗಳು ಹಿಂದೂ ಧರ್ಮದ ವಿರೋಧಿಗಳು ಹೀಗಾಗಿ ಬೆದರಿಕೆ ಪತ್ರ ಬರೆದೆ ಎಂದು ಶಿವಾಜಿರಾವ್ ಹೇಳಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಶಿವಾಜಿರಾವ್ ಅವರ ಹಿನ್ನೆಲೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಶಿವಾಜಿರಾವ್ ಇದುವರೆಗೂ ಏಳು ಪತ್ರಗಳನ್ನು ಬರೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಆರೋಪಿಯನ್ನ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.
ಹಾಗಾದರೆ ಯಾವೆಲ್ಲ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದರು..?
ಕುಂ.ವೀರಭದ್ರಪ್ಪ (ಕೊಟ್ಟೂರು ಪೊಲೀಸ್ ಠಾಣೆ- 2022)
ಬಿ ಎಲ್ ವೇಣು – (ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆ-2022)
ಬಂಜಗೇರಿ ಜಯಪ್ರಕಾಶ್ – (ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಕೇಸ್ 2022 ಹಾಗೂ 2023)
ಬಿ.ಟಿ ಲಲಿತಾ ನಾಯಕ್ – (ಸಂಜಯನಗರ ಪೊಲೀಸ್ ಠಾಣೆ 2022)
ವಸುಂಧರ ಭೂಪತಿ – (ಬಸವೇಶ್ವರ ನಗರ ಪೊಲೀಸ್ ಠಾಣೆ ಎರಡು ಕೇಸ್ 2022-2023)
ಪೊಲೀಸರು ಈ ಎಲ್ಲಾ ಬೆದರಿಕೆ ಪತ್ರಗಳನ್ನು ಎಫ್ ಎಸ್ ಎಲ್ ಗೆ ರವಾನೆ ಮಾಡಿದ್ದರು. ಎಫ್ ಎಸ್ಎ ಲ್ ವರದಿಯಲ್ಲಿ ಎಲ್ಲಾ ಪತ್ರಗಳನ್ನು ಒಬ್ಬರೇ ಬರೆದಿರುವುದು ದೃಢವಾಗಿತ್ತು. ಹೀಗಾಗಿ 2023 ರ ಆಗಸ್ಟ್ ನಲ್ಲಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.