ಮನೆ ರಾಜ್ಯ ಕಾಣೆಯಾಗಿದ್ದ ಯುವಕನ ಶವ ಗವಿರಂಗ ಸ್ವಾಮಿ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾಣೆಯಾಗಿದ್ದ ಯುವಕನ ಶವ ಗವಿರಂಗ ಸ್ವಾಮಿ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆ

0

ರಾಮನಗರ: ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ಯುವಕನ ಮೃತದೇಹ ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಪುರ ಗ್ರಾಮದ‌ ಹೊರವಲಯದಲ್ಲಿರುವ ಗವಿರಂಗ ಸ್ವಾಮಿ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಬೆಂಗಳೂರಿನ ಹೊಸಕೆರೆ ಹಳ್ಳಿ ನಿವಾಸಿಯಾದ ಲೋಕೇಶ್(35) ಎಂದು ಗುರುತಿಸಲಾಗಿದೆ.

ಲೋಕೇಶ್ ಕಳೆದ ತಿಂಗಳು ಡಿ.31 ರಂದು ನಾಪತ್ತೆಯಾಗಿದ್ದ ಎನ್ನಲಾಗಿದೆ. ಈ ಸಂಬಂಧ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.

ಬೈಕ್ ನಲ್ಲಿ ಬಂದು ಸಿಂಗರಾಜಪುರದ ಬೆಟ್ಟದಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು. ಬೆಟ್ಟದ ಬಳಿ ಕಳೆದ ಮೂರು ದಿನಗಳಿಂದ ಬೈಕ್ ನಿಲ್ಲಿಸಿದ್ದನ್ನು ನೋಡಿ ಅನುಮಾನ ಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಅಕ್ಕೂರು ಠಾಣೆ ಪೊಲೀಸರು ಪರಿಶೀಲಿಸಿದಾಗ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ದೇಹ ಪತ್ತೆಯಾಗಿದೆ.

ಹಿಂದಿನ ಲೇಖನನಾನು ನ್ಯಾಷನಲ್ ಲೀಡರ್ ಅಲ್ಲ: ಯತೀಂದ್ರ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟು
ಮುಂದಿನ ಲೇಖನಕೇಂದ್ರ ಸರ್ಕಾರದ ಮೇಲೆ ಆರೋಪ ನಿಲ್ಲಿಸಿ, ಎರಡು ತಿಂಗಳಾದರೂ ರೈತರಿಗೆ 2 ಸಾವಿರ ರೂ. ತಲುಪಿಲ್ಲ: ಆರ್‌.ಅಶೋಕ