ಹುಬ್ಬಳ್ಳಿ: ಕೇಂದ್ರ ಸರ್ಕಾರವು 5 ಕೆಜಿ ಅಕ್ಕಿ ಖರೀದಿ ಬಗ್ಗೆ ಮಾತು ಕೊಟ್ಟಿತ್ತು. ಈ ಕಾರ್ಯಕ್ರಮ ಯಶಸ್ವಿ ಆಗಬಾರದೆಂದು ಈಗ ಅದನ್ನು ಹಿಂದೆ ಪಡೆದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಬೇಸರ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ ಎಂದರು.
ಕೇಂದ್ರ ಸರ್ಕಾರವನ್ನು ಕೇಳಿ ಗ್ಯಾರಂಟಿ ಘೋಷಣೆ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತ, ಪತ್ರದ ಮೂಲಕ ಅವರು ತಾನೇ ಮಾತುಕೊಟ್ಟಿದ್ದು. ಕಳೆದ ಬಾರಿ ಬಿಜೆಪಿಯು ತನ್ನ ಪ್ರಣಾಳಿಕೆಯನ್ನು ಕೇಂದ್ರಕ್ಕೆ ಕೇಳಿ ಕೊಟ್ಟಿತ್ತಾ? ಪ್ರಣಾಳಿಕೆ ಕೊಡುವಂತದ್ದು ಆಯಾ ರಾಜ್ಯಕ್ಕೆ ಸಂಬಂಧಪಟ್ಟಿದ್ದು. ಕೇಂದ್ರದವರು ಮಾತುಕೊಟ್ಟು ವಾಪಸ್ಸು ಪಡೆದ ಉದ್ದೇಶ ಏನು? ನಾವು ನೀಡಿದ ಕಾರ್ಯಕ್ರಮ ಯಶಸ್ವಿ ಆಗಬಾರದೆಂಬ ಉದ್ದೇಶ ಅವರದ್ದಿದೆ. ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡುತ್ತಿದೆ. ಅಕ್ಕಿಗಾಗಿ ಮುಖಂಡರು, ಕಾರ್ಯಕರ್ತರೊಂದಿಗೆ ನಾಳೆ ಪ್ರತಿಭಟನೆ ಮಾಡುತ್ತೇವೆ ಎಂದರು.
ಶಕ್ತಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳಲ್ಲಿ ಗೊಂದಲ ಇದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಗೊಂದಲ ಇಲ್ಲ. ಸುಮಾರು 60 ಸಾವಿರ ಕೋಟಿ ರೂ. ವೆಚ್ಚದಲ್ಲಿ ಆಗುತ್ತಿರುವ ಕಾರ್ಯಕ್ರಮ ಅದು. ಅದನ್ನು ಅನುಷ್ಠಾನಕ್ಕೆ ತರುವುದಕ್ಕೆ ನಾವು ಸಮಯ ನಿಗದಿ ಪಡಿಸಿದ್ದೇವೆ ಎಂದರು.
ಕೈಗಾರಿಕೋದ್ಯಮಿಗಳು ವಿದ್ಯುತ್ ಬಿಲ್ ಹೆಚ್ಚಳಕ್ಕೆ ಬಂದ್ ಕರೆ ನೀಡಿದ್ದಾರಲ್ಲ ಎಂದಾಗ, ಮುಂದಿನ ದಿನಗಳಲ್ಲಿ ಸರ್ಕಾರ ಇದರ ಬಗ್ಗೆ ಚರ್ಚೆ ಮಾಡುತ್ತದೆ ಎಂದರು.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.