ಬೆಂಗಳೂರು: ತರಕಾರಿ ದರ ಮತ್ತು ಹಾಲಿನ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಹೋಟೆಲ್ಗಳಲ್ಲಿ ತಿಂಡಿ-ತಿನಿಸುಗಳ ಬೆಲೆ ಕೂಡ ಹೆಚ್ಚಾಗಲಿದೆ. ಈ ಮೂಲಕ ಹೋಟೆಲ್ ನೆಚ್ಚಿಕೊಂಡಿರುವ ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ.ವಿದ್ಯುತ್ ಶುಲ್ಕ, ತರಕಾರಿ, ಬೇಳೆಕಾಳುಗಳ ದರ ಏರಿಕೆ ಬಿಸಿಯ ಮಧ್ಯೆ ಇದೀಗ ಹಾಲು ಬೆಲೆ ಹೆಚ್ಚಾಗಿರುವುದರಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ ಬಿದ್ದಿತ್ತು.
ಆರ್ಥಿಕ ನಷ್ಟದಿಂದ ಹೊರಬರಲು ಶೇ.10ರಷ್ಟು ದರ ಏರಿಸಲು ಹೋಟೆಲ್ ಮಾಲೀಕರು ತೀರ್ಮಾನಿಸಿದ್ದಾರೆ. ಆದರೆ ಕಳೆದ ವಾರದಿಂದ ಬೆಂಗಳೂರಿನ ಹಲವು ಹೋಟೆಲ್ಗಳು ತಿನಿಸುಗಳ ಬೆಲೆಯನ್ನು ಈಗಾಗಲೇ ಏರಿಸಿವೆ.ಜನಸಾಮಾನ್ಯರಿಗೆ ಬರೆ: ಬೆಲೆ ಏರಿಕೆ ಒತ್ತಡ ಎದುರಿಸುತ್ತಿರುವ ಹೋಟೆಲ್ ಉದ್ಯಮ ತನ್ನ ಮೇಲಿನ ಆರ್ಥಿಕ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಮುಂದಾಗಿದೆ. ಇದು ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆ.
ಕಳೆದ ವರ್ಷ ಸಿಲಿಂಡರ್ಗೆ ನೀಡುತ್ತಿದ್ದ ರಿಯಾಯಿತಿ ರದ್ದುಗೊಳಿಸಲಾಗಿದೆ. ಕಳೆದ ಕೆಲವು ತಿಂಗಳಿನಿಂದ ತೊಗರಿ, ಉದ್ದು, ಹೆಸರು ಬೇಳೆ ಸೇರಿದಂತೆ ಬೇಳೆ ಕಾಳುಗಳ ದರ ಏರಿಕೆ ಕಂಡಿದ್ದು ನೇರವಾಗಿ ಹೋಟೆಲ್ಗಳ ಆರ್ಥಿಕ ಹೊರೆಗೆ ಕಾರಣವಾಗಿತ್ತು.
ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ಟೊಮೆಟೊ, ಕ್ಯಾರೆಟ್, ಬೀನ್ಸ್ ಬೆಲೆ ಶತಕ ದಾಟಿರುವುದು ಮತ್ತಷ್ಟು ಹೊಡೆತ ನೀಡಿದೆ. ಅಲ್ಲದೇ ಆಗಸ್ಟ್ನಿಂದ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಬೆಲೆ ಹೆಚ್ಚಿಸುತ್ತಿರುವುದು ಉದ್ಯಮಕ್ಕೆ ಪೆಟ್ಟು ಕೊಟ್ಟಿದೆ. ಹೀಗಾಗಿ ಬೆಲೆ ಏರಿಕೆ ಅನಿವಾರ್ಯ ಎಂದು ಕೆಲವು ಹೋಟೆಲ್ ಮಾಲೀಕರು ಹೇಳಿದ್ದಾರೆ.
“ಹೋಟೆಲ್ಗಳು ಹಿಂದೆಂದಿಗಿಂತ ಈಗ ಹೆಚ್ಚಿನ ಸಂದಿಗ್ಧತೆ ಎದುರಿಸುತ್ತಿವೆ. ಕಳೆದೊಂದು ತಿಂಗಳಿಂದ ಲಾಭವನ್ನೇ ಕಂಡಿಲ್ಲ. ಕೆಲ ತಿನಿಸುಗಳನ್ನು ಮಾಡಿ ನಷ್ಟ ಅನುಭವಿಸಿದ್ದಾರೆ. ಸಾಮಾನ್ಯ ಜನರು ಬರುವುದೇ ದರ್ಶಿನಿಗಳಿಗೆ. ಆದ್ದರಿಂದ ನಮಗೆ ಏಕಾಏಕಿ ಬೆಲೆ ಹೆಚ್ಚಿಸಲೂ ಆಗುವುದಿಲ್ಲ. ಆದರೆ ಈಗ ಅನಿವಾರ್ಯತೆಗೆ ಸಿಲುಕಿದ್ದೇವೆ” ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
“ಒಂದೆಡೆ ಏರಿಕೆಯಾಗಿದ್ದ ಕಾಫಿಪುಡಿ ಬೆಲೆ ಇನ್ನೂ ಇಳಿದಿಲ್ಲ. ಇದೀಗ ಹಾಲಿನ ದರವೂ ಹೆಚ್ಚಾಗಿದೆ. ಹೀಗಾಗಿ ಚಹಾ-ಕಾಫಿ ಬೆಲೆ ಕೂಡ ಏರಿಕೆಯಾಗುತ್ತಿದೆ. ಸಾಮಾನ್ಯ ಹೋಟೆಲ್ಗಳಲ್ಲಿ 15 ರೂಪಾಯಿ ಇದ್ದ ಚಹಾ-ಕಾಫಿ 20 ರೂವರೆಗೂ ಏರಿಕೆಯಾಗುವ ಸಾಧ್ಯತೆ ಇದೆ. ಶೀಘ್ರವೇ ಈ ಬಗ್ಗೆ ಸಂಘ ಕೂಡ ನಿರ್ಧಾರ ಕೈಗೊಳ್ಳಲಿದೆ” ಎಂದು ಬೃಹತ್ ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.
ಹಾಲು ದರ ಏರಿಕೆ, ಬೇಕರಿ ತಿನಿಸುಗಳು ಮತ್ತಷ್ಟು ದುಬಾರಿ: ಹೋಟೆಲ್ ಉತ್ಪನ್ನಗಳ ಜೊತೆಗೆ ಬೇಕರಿ ಖಾದ್ಯಗಳ ಬೆಲೆಯೂ ಹೆಚ್ಚಾಗುತ್ತಿದೆ. ಕೇಕ್, ಪೇಡಾ, ಖೋವಾ, ಬ್ರೆಡ್, ಬನ್ ಸೇರಿದಂತೆ ಸಿಹಿ ತಿನಿಸುಗಳ ಬೆಲೆಯೂ ಹೆಚ್ಚಾಗಲಿದೆ. ಕಳೆದ ಆರು ತಿಂಗಳ ಹಿಂದೆ ಏರಿಕೆಯಾಗಿದ್ದ ಮೈದಾ ಹಿಟ್ಟು ಬೆಲೆ ಇಳಿದಿಲ್ಲ. ನಾವು ತಯಾರಿಸುವ ಎಲ್ಲ ಖಾದ್ಯಗಳಿಗೂ ಹಾಲು ಅತ್ಯವಶ್ಯ. ಹೀಗಾಗಿ ಬೇಕರಿ ತಿನಿಸುಗಳ ಬೆಲೆ ಏರಿಸಬೇಕಾಗುತ್ತದೆ ಎಂದು ಬೇಕರಿ ವರ್ತಕರು ತಿಳಿಸಿದ್ದಾರೆ. ಇದರಿಂದ ಬೇಕರಿ ತಿನಿಸುಗಳ ಬೆಲೆ ಕೂಡ ಶೀಘ್ರದಲ್ಲೇ ಏರಲಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.