ಮನೆ ಅಪರಾಧ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ವಾಹನ ಚಾಲಕ ಆತ್ಮಹತ್ಯೆ

ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ವಾಹನ ಚಾಲಕ ಆತ್ಮಹತ್ಯೆ

0

ಉಡುಪಿ: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದು ನಸುಕಿನ ವೇಳೆ ಇಂದ್ರಾಳಿ ರೈಲ್ವೆ ಸೇತುವೆ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ಸಂಜೀವ ಹೆಗ್ಡೆ ಎಂಬವರ ಪುತ್ರ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ.

ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಸ್ಥಳದಲ್ಲಿ ಪತ್ತೆಯಾದ ಕಾರಿನ ಹಸಿರು ಫಲಕದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂಬ ಉಲ್ಲೇಖ ಹಾಗೂ ಮೃತರ ಕಿಸೆಯಲ್ಲಿ ಆಧಾರ್ ಕಾರ್ಡ್ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

ಹಿಂದಿನ ಲೇಖನಅಂಗವಿಕಲತೆ ಇಲ್ಲದಿದ್ದರೂ ಜೀವನಾಂಶಕ್ಕೆ ಆದೇಶಿಸುವುದು ಸೋಮಾರಿತನಕ್ಕೆ ಉತ್ತೇಜನ ನೀಡಿದಂತೆ : ಹೈಕೋರ್ಟ್
ಮುಂದಿನ ಲೇಖನಲಖಿಂಪುರ ಖೇರಿ ಪ್ರಕರಣ: ಆರೋಪಿ ಆಶೀಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು