ಮನೆ ರಾಜಕೀಯ ಬಿಜೆಪಿಯೊಳಗಿನ ಕಿಚ್ಚಿಗೆ ಪ್ರತಾಪ್ ಸಿಂಹ, ರಾಮದಾಸ್ ನಡುವಿನ ಕಾಳಗವೇ ಸಾಕ್ಷಿ: ಕಾಂಗ್ರೆಸ್

ಬಿಜೆಪಿಯೊಳಗಿನ ಕಿಚ್ಚಿಗೆ ಪ್ರತಾಪ್ ಸಿಂಹ, ರಾಮದಾಸ್ ನಡುವಿನ ಕಾಳಗವೇ ಸಾಕ್ಷಿ: ಕಾಂಗ್ರೆಸ್

0

ಬೆಂಗಳೂರು(Bengaluru): ಬಿಜೆಪಿಯೊಳಗೆ ಕಿಚ್ಚು ಎಷ್ಟಿದೆ ಎನ್ನುವುದಕ್ಕೆ ಮೈಸೂರಿನಲ್ಲಿ ನಡೆಯುತ್ತಿರುವ ಪ್ರತಾಪ್ ಸಿಂಹ vs ರಾಮದಾಸ್ ಕಾಳಗವೇ ಸಾಕ್ಷಿ  ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಮೈಸೂರು ನಗರದ ಊಟಿ ರಸ್ತೆಯ ಜೆಎಸ್‌ಎಸ್‌ ಕಾಲೇಜು ಬಳಿ ನಿರ್ಮಿಸಿರುವ ಬಸ್‌ ನಿಲ್ದಾಣದ ಮೇಲಿನ ಗುಂಬಜ್ ತೆರವಿಗೆ ಶತಸಿದ್ಧ ಎಂದು ಸಂಸದ ಪ್ರತಾಪ ಸಿಂಹ ಹೇಳಿಕೆ ನೀಡಿರುವುದು ವಿವಾದಕ್ಕೀಡಾಗಿದೆ.

ಇದೇ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಶಾಸಕರು ಕಟ್ಟಿಸಿದ ಬಸ್ ನಿಲ್ದಾಣವನ್ನು ಸಂಸದ ಒಡೆಯಲು ಹೊರಟಿದ್ದಾರೆ. ಬೇರೆಯವರ ಮನೆಯ ದೋಸೆಯ ತೂತನ್ನು ಹುಡುಕುವ ಬದಲು ಬಿಜೆಪಿಯವರು ತಮ್ಮ ಮನೆಯ ಕಾವಲಿಯ ತೂತನ್ನು ನೋಡಿಕೊಂಡರೆ ಒಳಿತು ಎಂದು ಲೇವಡಿ ಮಾಡಿದೆ.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ರತಾಪ ಸಿಂಹ, ಗುಂಬಜ್ ತೆರವಿಗೆ ನಾನು ನೀಡಿದ್ದ ಗಡುವಿನಲ್ಲಿ 2 ದಿನ ಬಾಕಿ ಇದೆ. ಅಷ್ಟರಲ್ಲಿ ತೆರವುಗೊಳಿಸದಿದ್ದರೆ, ಈಗಾಗಲೇ ಹೇಳಿದಂತೆ ನಾನೇ ತೆರವು ಮಾಡುತ್ತೇನೆ ಎಂದಿದ್ದರು.

ರಾಮದಾಸ್ ಸ್ಪಷ್ಟನೆ

ಪಾರಂಪರಿಕ ನಗರಿಯ ಮಹತ್ವ ಸಾರಲು ಕೃಷ್ಣರಾಜ ಕ್ಷೇತ್ರದಲ್ಲಿ ಬಸ್ ಪ್ರಯಾಣಿಕರ ತಂಗುದಾಣಗಳನ್ನು ಅರಮನೆ ವಿನ್ಯಾಸದ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆ. ಯಾವುದೇ ಧರ್ಮದ ಆಧಾರದಲ್ಲಲ್ಲ ಎಂದು ಶಾಸಕ ಎಸ್.ಎ.ರಾಮದಾಸ್ ಸ್ಪಷ್ಟಪಡಿಸಿದ್ದಾರೆ.

ಹಿಂದಿನ ಲೇಖನಆವಿಷ್ಕಾರ ಸೂಚ್ಯಂಕದಲ್ಲಿ ಬೆಂಗಳೂರಿಗೆ ಅಗ್ರ ಸ್ಥಾನ: ಪ್ರಧಾನಿ ಮೋದಿ
ಮುಂದಿನ ಲೇಖನಮೆಟ್ರೊ ಕಾಮಗಾರಿ: ಗಿಡ ನೆಟ್ಟಿರುವುದು, ಮರ ಸ್ಥಳಾಂತರ ಕುರಿತು ಸಂಕ್ಷಿಪ್ತ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ