ಮೈಸೂರು(Mysuru): ಜಿಲ್ಲೆಯ ನಂಜನಗೂಡು ತಾಲೂಕು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಇಂದು ಮಲೆ ಮಹದೇಶ್ವರ ಹಾಲರವಿ ಉತ್ಸವ ಅದ್ದೂರಿಯಾಗಿ ಜರುಗಿತು.
ಕಪಿಲಾ ನದಿಯಿಂದ 101 ಹೆಣ್ಣುಮಕ್ಕಳಿಂದ ಕಳಸದಲ್ಲಿ ಗಂಗೆಯನ್ನು ತಲೆಯ ಮೇಲೆ ಹೊತ್ತುಕೊಂಡು ಹಾಗೂ ವೀರಗಾಸೆ, ಕಂಸಾಳೆ ಕಲಾತಂಡ, ಡೊಳ್ಳು ಕುಣಿತ, ಕಡ ಪಡೆಯ ಕುಣಿತ ಜೊತೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ಗ್ರಾಮದಲ್ಲಿರುವ ಮನೆಯ ಮಾದೇಶ್ವರನ ದೇವರಲ್ಲಿ ಅಂತ್ಯಗೊಳಿಸಲಾಯಿತು.
ಈ ಮೆರವಣಿಗೆಯಲ್ಲಿ ಕಡಕೋಳ ಬೀರೇಶ್ವರ ದೇವಾಲಯದ ಬಸವ ಕಳಸ ಬತ್ತು ಸಾಗಿರುವುದು ವಿಶೇಷವಾಗಿತ್ತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಗಾಯತ್ರಿ ಮಹದೇವು ಮಾತನಾಡಿ, ಕೊರೋನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಗ್ರಾಮದಲ್ಲಿ ಈ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಯಾವುದೇ ತೊಂದರೆ ಇಲ್ಲದ ಕಾರಣ ಗ್ರಾಮದಲ್ಲಿ ಅದ್ದೂರಿಯಾಗಿ ಮಲೆ ಮಾದೇಶ್ವರನ ಉತ್ಸವವನ್ನು ಆಚರಿಸಲಾಯಿತು. ಗ್ರಾಮದ ಒಳಿತಿಗಾಗಿ ನಾವು ಶ್ರದ್ಧಾಭಕ್ತಿಯಿಂದ ದೇವಾಲಯದಲ್ಲಿ ವಿಶೇಷ ಪೂಜೆ ಕಾರ್ಯಕ್ರಮಗಳನ್ನು ನೆರವೇರಿಸಲಾಗಿದೆ ಎಂದು ತಿಳಿಸಿದರು.
ಈ ಉತ್ಸವದಲ್ಲಿ ಕಂಸಾಳೆ ಕಲಾತಂಡ , ವೀರಗಾಸೆ ಕುಣಿತ, ಮಹಿಳೆಯರ ಡೊಳ್ಳು ಕಣಿತ ಭಕ್ತಾದಿಗಳ ಗಮನಸೆಳೆಯಿತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.