ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಡೆಸಲು ಉದ್ದೇಶಿಸಿದ್ದ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ.
ವಿವಿಧ ವಿಭಾಗಗಳಿಗೆ ನೇಮಿಸಿಕೊಳ್ಳಲು 27ಸಹಾಯಕ ಪ್ರಾಧ್ಯಾಪಕರು ಮತ್ತು ಏಳು ಪ್ರಾಧ್ಯಾಪಕರ ಆಯ್ಕೆ ಪ್ರಕ್ರಿಯೆಗೆ ಮುಕ್ತ ವಿವಿ ಚಾಲನೆ ನೀಡಿತ್ತು. ಈ ಸಂಬಂದ ಮೌಖಿಕ ಸಂದರ್ಶನಕ್ಕೆ ದಿನಾಂಕ ನಿಗಧಿಪಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಕಾರಣ ಸಂದರ್ಶನಕ್ಕೆ ತಡೆಯಾಜ್ಞೆ ನೀಡಲಾಗಿತ್ತು. ಇದೀಗ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ರಾಜ್ಯ ಹೈಕೋರ್ಟ್ ಮತ್ತೆ ವಿಸ್ತರಿಸಿದೆ.
ಕಳೆದ ಫೆ. 17ರಂದು ಈ ಹುದ್ದೆಗಳಿಗೆ ಸಂದರ್ಶನ ನಡೆಯಬೇಕಿತ್ತು. ಆದರೆ ದಾಖಲಾದ ರಿಟ್ ಅರ್ಜಿ ಪರಿಶೀಲಿಸಿ ನ್ಯಾಯಾಲಯ 16ರಂದು ತಡೆಯಾಜ್ಞೆ ನೀಡಿತ್ತು. ಹುದ್ದೆಗಳ ವರ್ಗೀಕರಣ ಮತ್ತು ಹೈಕ ಮೀಸಲಾತಿ ವಿಧಾನ ಸಮರ್ಪಕವಾಗಿಲ್ಲ ಎಂಬುದು ಅರ್ಜಿದಾರರ ದೂರು.
ಈ ಹಿನ್ನೆಲೆಯಲ್ಲಿ ಈ ನೇಮಕಾತಿ ವಿವಾದಕ್ಕೆ ಸಿಲುಕಿತ್ತು. ನ್ಯಾಯಾಲಯದಲ್ಲಿ ಈ ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ ಒಂದರಂದು ನಿಗಧಿಯಾಗಿದ್ದು ಸದ್ಯ ವಿವಿ ಈ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ತೆಗೆದುಕೊಳ್ಳಲು ಅಸಹಾಯಕವಾಗಿದೆ.
ಪ್ರಾಧ್ಯಾಪಕರ ನೇಮಕ ಮತ್ತು ಮೀಸಲು ವರ್ಗೀಕರಣ ಪ್ರಕ್ರಿಯೆ ಕುರಿತು ನ್ಯಾಯಾಲಯ ಇದೇ ವೇಳೆ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯಿಂದ ಮಾಹಿತಿ ಕೇಳಿತ್ತು. ಅಲ್ಲದೆ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನೋಟೀಸ್ ಜಾರಿ ಮಾಡಲು ನಿರ್ದೇಶನ ನೀಡಿತ್ತು. ಸದ್ಯ ಮುಕ್ತ ವಿವಿ ನ್ಯಾಯಾಲಯದಲ್ಲಿ ತನ್ನ ಪ್ರತಿಕ್ರಿಯೆ ದಾಖಲಿಸಿದೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.