ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದರೂ ಕೊಂಚ ಇಳಿಮುಖ ಕಾಣುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವಾರ ರೆಡ್ ಮತ್ತು ಆರಂಜ್ ಅಲರ್ಟ್ ನೀಡಿದ್ದ ಹವಾಮಾನ ಇಲಾಖೆ, ಶನಿವಾರದಿಂದ ಮೂರು ದಿನಗಳಿಗೆ ಅನ್ವಯವಾಗುವಂತೆ ಯೆಲ್ಲೋ ಅಲರ್ಟ್ ನೀಡಿದೆ. ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಕೂಡ ಸೂಚಿಸಿದೆ.
ಕರಾವಳಿ ಜಿಲ್ಲೆಯ ಹಲವು ಸ್ಥಳಗಳಲ್ಲಿ, ಉತ್ತರ ಒಳನಾಡಿನ ಕೆಲವು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆ ಮುಂದುವರೆಯಲಿದೆ. ಶುಕ್ರವಾರ ಬೆಳಗ್ಗೆಯವರೆಗೆ ಅತಿ ಹೆಚ್ಚು ಮಳೆ ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ತಲಾ 8 ಸೆ.ಮೀ ಮಳೆಯಾಗಿದೆ. ಇನ್ನು ಉಡುಪಿಯ ಕೋಟದಲ್ಲಿ 7, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 6, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ 5 ಸೆ.ಮೀ, ಉಪ್ಪಿನಂಗಡಿಯಲ್ಲಿ 4 ಸೆ.ಮೀ ಮಳೆ ಬಂದಿದೆ. ಉಳಿದಂತೆ ಪುತ್ತೂರಿನ ಹೆಚ್ಎಂಎಸ್, ಮೂಲ್ಕಿ, ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲೂ ಉತ್ತಮ ಮಳೆ ಸುರಿದಿದೆ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು 30 ರಿಂದ 31 ಡಿಗ್ರಿ ಇರಲಿದೆ ಎಂದು ಹೇಳಿದೆ.
ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ದಕ್ಷಿಣ ಒಳನಾಡು ಮೇಲೆ ಸಾಧಾರಣವಾಗಿದೆ. ಉತ್ತರ ಒಳನಾಡು ಮೇಲೆ ದುರ್ಬಲವಾಗಿದೆ. ಶನಿವಾರ ಕರಾವಳಿಯ ಬಹುತೇಶ ಕಡೆಗಳಲ್ಲಿ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.