ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರಮೋದಿ ಅವರು ಶುಕ್ರವಾರ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಆರ್. ಅಶೋಕ್ , ಸಿ.ಸಿ. ಪಾಟೀಲ್ ಹಾಗೂ ಮತ್ತಿತರರು ಹಾಜರಿದ್ದರು.
ಶಿಲ್ಪಿ ರಾಮ್ ಸುತಾರಾ ಅವರಿಗೆ ಅಭಿನಂದನೆ:
ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ನಿರ್ಮಿಸಿದವರು ರಾಮ್ ಸುತಾರ್. ಇಡೀ ಭಾರತದಲ್ಲಿ ಅತ್ಯಂತ ಶ್ರೇಷ್ಠ ಶಿಲ್ಪಿ. ಅಹಮದಾಬಾದ್ನಲ್ಲಿರುವ ವಲ್ಲಭಭಾಯಿ ಪಟೇಲ್ ಅವರ ಐಕ್ಯತಾ ಮೂರ್ತಿಯನ್ನೂ ಹಾಗೂ ಅಂಬೇಡ್ಕರ್ ಅವರ ಅತಿ ಎತ್ತರದ ಮೂರ್ತಿಯನ್ನು ನಿರ್ಮಿಸಿದ ಖ್ಯಾತಿ ಅವರದ್ದು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ರಾಮ್ ಸುತಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಪ್ರಗತಿ ಪ್ರತಿಮೆ ಅನಾವರಣ ಮಾಡಿದ ನಂತರ ಸಾರ್ವಜನಿಕ ಸಭೆಗೆ ತೆರಳಿದರು.
ಕೆಂಪೇಗೌಡ ಕಂಚಿನ ಪ್ರತಿಮೆಯ ವಿಶೇಷತೆ ಏನು?
– ಕೆಂಪೇಗೌಡರ ಕಂಚಿನ ಪ್ರತಿಮೆಯ ಎತ್ತರ 108ಅಡಿ
-218 ಟನ್ ತೂಕದ ಪ್ರತಿಮೆ ಇದಾಗಿದೆ ( 120 1ನ್ ಉಕ್ಕು, 98 ಟನ್ ಕಂಚು)
– ಕೆಂಪೇಗೌಡ ಪ್ರತಿಮೆಯ ಖಡ್ಗದ ತೂಕ 4 ಟನ್ ನಷ್ಟದೆ.
– ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಮಾಡಿದ ಖರ್ಚು 84 ಕೋಟಿ.
– ಪ್ರತಿಮೆಯನ್ನು ಸಿದ್ಧಪಡಿಸಿದವರು ರಾಮ್ಸುತಾರ್ ಕ್ರಿಯೇಷನ್ಸ್.
– ಪ್ರತಿಮೆಯ ಸುತ್ತ ಥೀಂ ಪಾರ್ಕ್ ನಿರ್ಮಾಣ. 23 ಎಕರೆ ವಿಸ್ತೀರ್ಣದ ಥೀಂ ಪಾರ್ಕ್.