ಮನೆ ರಾಜಕೀಯ ಪ್ರಚಾರ ಕಾರ್ಯದಲ್ಲಿ ಯಾರನ್ನು ಕಡೆಗಣಿಸಿದ್ದಾರೆ ಯಾರನ್ನು ಪರಾಂಬರಿಸಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಲ್ಲ: ಲಕ್ಷ್ಮಣ ಸವದಿ

ಪ್ರಚಾರ ಕಾರ್ಯದಲ್ಲಿ ಯಾರನ್ನು ಕಡೆಗಣಿಸಿದ್ದಾರೆ ಯಾರನ್ನು ಪರಾಂಬರಿಸಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಲ್ಲ: ಲಕ್ಷ್ಮಣ ಸವದಿ

0

ಚಿಕ್ಕೋಡಿ: ಚುನಾವಣಾ ಪ್ರಚಾರ ಕಾರ್ಯದಲ್ಲಿ ಕಾಂಗ್ರೆಸ್ ಪಕ್ಷ ತಮ್ಮನ್ನು ಕಡೆಗಣಿಸುತ್ತಿದೆ ಎಂಬ ವದಂತಿಯನ್ನು ಲಕ್ಷ್ಮಣ ಸವದಿ ಅಲ್ಲಗಳೆದರು.

ಚಿಕ್ಕೋಡಿಯಲ್ಲಿ ಇಂದು ಮಾತಾಡಿದ ಸವದಿ, ಇನ್ನೂ ಚುನಾವಣಾ ಪ್ರಚಾರ ಆರಂಭವಾಗಿಲ್ಲ, ಈಗಷ್ಟೇ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ, ನಾಮಪತ್ರಗಳ ಸಲ್ಲಿಕೆಯಾದ ಬಳಿಕ ಚುನಾವಣಾ ಸಮಿತಿಗಳನ್ನು ರಚಿಸಿ ಪ್ರಚಾರ ಆರಂಭಿಸಲಾಗುತ್ತದೆ. ಪಕ್ಷದ ಹೈಕಮಾಂಡ್ ಇದುವರೆಗೆ ಯಾರಿಗೂ ಕ್ಷೇತ್ರಗಳ ಜವಾಬ್ದಾರಿಯನ್ನು ವಹಿಸಿಕೊಟ್ಟಿಲ್ಲ, ಅಭ್ಯರ್ಥಿಗಳ ಆಯ್ಕೆಗಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮೀಕ್ಷೆಗಳನ್ನು ನೀಡುವ ಕೆಲಸವಹಿಸಿಕೊಡಲಾಗಿತ್ತು, ಪ್ರಚಾರ ಕಾರ್ಯದಲ್ಲಿ ಯಾರನ್ನು ಕಡೆಗಣಿಸಿದ್ದಾರೆ ಯಾರನ್ನು ಪರಾಂಬರಿಸಿದ್ದಾರೆ ಅಂತ ಪ್ರಶ್ನೆ ಉದ್ಭವಿಸಲ್ಲ ಎಂದು ಸವದಿ ಹೇಳಿದರು.

ಚುನಾವಣೆಯ ಸಂದರ್ಭದಲ್ಲಿ ಜವಾಬ್ದಾರಿ ನೀಡಿದರೆ ಮಾತ್ರ ಕೆಲಸ ಮಾಡಬೇಕು ಅಂತಿರಲ್ಲ, ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕಾಗುತ್ತದೆ ಎಂದು ಲಕ್ಷ್ಮಣ ಸವದಿ ಹೇಳಿದರು.

ಹಿಂದಿನ ಲೇಖನಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಮುಂದಿನ ಲೇಖನ‘ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು’: ಶಿವರಾಜ್ ತಂಗಡಗಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು