ಕಳೆದ ನಾಲ್ಕು ದಶಕಗಳಲ್ಲಿ ಭಾರತದ ಸಮಾಜ ಸಂಪೂರ್ಣ ಬದಲಾವಣೆಗೆ ಒಳಪಟ್ಟಿದ್ದು, ಲೈಂಗಿಕ ಪ್ರಕರಣಗಳಲ್ಲಿ ತಪ್ಪಾಗಿ ಸಿಲುಕಿಸುವುದು ಏರುಗತಿಯಲ್ಲಿದೆ ಎಂದು ಈಚೆಗೆ ಅಲಾಹಾಬಾದ್ ಹೈಕೋರ್ಟ್ ಅತ್ಯಾಚಾರ ಪ್ರಕರಣದಲ್ಲಿನ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವಾಗ ಅಭಿಪ್ರಾಯಪಟ್ಟಿದೆ.
[ಸಂದೀಪ್ ಕುಮಾರ್ ಮಿಶ್ರಾ ವರ್ಸಸ್ ಉತ್ತರ ಪ್ರದೇಶ ರಾಜ್ಯ].
ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಕ್ರಿಷಣ್ ಪಹಲ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.
“ಭರ್ವಾಡಾ ಭೋಗಿನ್ಭಾಯ್ ಹಿರ್ಜಿಭಾಯ್ ವರ್ಸಸ್ ಗುಜರಾತ್ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬಳಿಕ ಗಂಗಾ ನದಿಯಲ್ಲಿ ಸಾಕಷ್ಟು ನೀರು ಹರಿದಿದೆ. ಸುಮಾರು ನಲವತ್ತು ವರ್ಷಗಳಲ್ಲಿ ಭಾರತದ ಸಮಾಜವು ಸಂಪೂರ್ಣವಾಗಿ ಬದಲಾಗಿದೆ. ಈಚೆಗೆ ಲೈಂಗಿಕ ಅಪರಾಧಗಳಲ್ಲಿ ತಪ್ಪಾಗಿ ಸಿಲುಕಿಸುವುದು ಹೆಚ್ಚಾಗಿದೆ. ಹಾಗಾಗಿ, ಜಾಮೀನು ನಿರ್ಧರಿಸುವಾಗ ಎಫ್ಐಆರ್ ದಾಖಲಿಸುವುದು ತಡವಾಗಿರುವುದನ್ನು ಪರಿಗಣಿಸಬೇಕು” ಎಂದು ಪೀಠ ಹೇಳಿದೆ.
2019ರ ಆಗಸ್ಟ್ 5ರಂದು ಮೀರತ್ನಲ್ಲಿ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ಗಳಾದ 376-ಡಿ, 342 ಮತ್ತು 506 ಅಡಿ ಪ್ರಕರಣ ದಾಖಲಿಸಲಾಗಿತ್ತು. ವಾರಾಣಸಿ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ವಾರಾಣಸಿ ಜಿಲ್ಲೆಯ ರೋಹಾನಿಯಾ ಪೊಲೀಸರು ತನಿಖೆ ನಡೆಸಬೇಕು ಎಂದು ಮೀರತ್ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪತ್ರ ಬರೆದಿದ್ದರು. ಹೀಗಾಗಿ, 2019ರ ಸೆಪ್ಟೆಂಬರ್ 9ರಂದು ಎಫ್ಐಆರ್ ದಾಖಲಿಸಲಾಗಿತ್ತು.
ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯು ಆಶ್ರಮವೊಂದರಲ್ಲಿ ಕೆಲಸದಲ್ಲಿದ್ದು ಅಲ್ಲಿನ ಅಕ್ರಮಗಳ ಬಗ್ಗೆ ಗಮನಸೆಳೆದ ನಂತರ ಅವರ ವಿರುದ್ಧ ಉದ್ದೇಶಪೂರ್ವಕವಾಗಿ ಸುಳ್ಳು ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದೆ ಎನ್ನುವುದು ಆರೋಪಿಯ ಪರ ವಕೀಲರ ವಾದವಾಗಿದೆ. ಎಫ್’ಐಆರ್ ದಾಖಲಿಸುವಲ್ಲಿನ ವಿಳಂಬವನ್ನು ಇದಕ್ಕೆ ಪೂರಕವಾಗಿ ಪ್ರಸ್ತಾಪಿಸಲಾಗಿದೆ.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.