ಛತ್ತೀಸ್ ಗಢ: ತಂದೆ ಕುಡಿಯಲು ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಮಗನೇ ಅಪ್ಪ, ಅಮ್ಮ, ಅಜ್ಜಿಯನ್ನು ಕೊಂದು, ದೇಹವನ್ನು ಸುಟ್ಟು ಹಾಕಿರುವ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.
ಉದಿತ್ ಭೋಯ್ ಮಾದಕ ವ್ಯಸನಿಯಾಗಿದ್ದು, ತಂದೆ ಹಣ ಕೊಡಲಿಲ್ಲ ಎನ್ನುವ ಕಾರಣಕ್ಕೆ ಮನೆಯಲ್ಲಿದ್ದವರನ್ನೆಲ್ಲಾ ಹತ್ಯೆ ಮಾಡಿದ್ದಾನೆ.ಬಳಿಕ ಮೂವರ ದೇಹವನ್ನೂ ಮನೆಯ ಹಿಂಭಾಗ ಸುಟ್ಟು ಹಾಕಿದ್ದಾನೆ.
ಸಿಂಗ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುಟ್ಕಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಉದಿತ್ ಭೋಯ್(24) ಎಂದು ಗುರುತಿಸಲಾಗಿದೆ.
ಆರೋಪಿಯ ತಂದೆ ಪ್ರಭಾತ್ ಭೋಯ್ ತನ್ನ ಪತ್ನಿ, ತಾಯಿ ಮತ್ತು ಮಗನೊಂದಿಗೆ ವಾಸವಾಗಿದ್ದರು. ಉದಿತ್ ತನ್ನ ತಂದೆ-ತಾಯಿ ಮತ್ತು ಅಜ್ಜಿ ಮಲಗಲು ಹೋದಾಗ ಕೊಂದಿದ್ದಾನೆ. ದೊಣ್ಣೆಯಿಂದ ತಂದೆಯ ತಲೆಗೆ ಹೊಡೆದು ನಂತರ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಲಾಟೆಯಿಂದ ಎಚ್ಚರಗೊಂಡ ಅಜ್ಜಿ ಮೇಲೂ ಉದಿತ್ ಹಲ್ಲೆ ನಡೆಸಿದ್ದಾನೆ.
ನಂತರ ಅವರ ಶವಗಳನ್ನು ಮನೆಯ ಬಾತ್ ರೂಂನಲ್ಲಿ ಇರಿಸಿದ್ದ. ಮರುದಿನ, ಉದಿತ್ ಮನೆಯ ಹಿತ್ತಲಿನಲ್ಲಿ ಮರ ಮತ್ತು ಸ್ಯಾನಿಟೈಸರ್ ಬಳಸಿ ದೇಹಗಳಿಗೆ ಬೆಂಕಿ ಹಚ್ಚಿದ್ದ. ನಂತರ ಉದಿತ್ ಅವರು ಮೇ 12 ರಂದು ಸಿಂಗ್ ಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದ. ಅಮಿತ್ ರಾಯ್ ಪುರದಲ್ಲಿ ಓದುತ್ತಿದ್ದ ಇನ್ನೊಬ್ಬ ಮಗ ಎಲ್ಲರೂ ನಾಪತ್ತೆಯಾಗಿರುವ ಬಗ್ಗೆ ಅನುಮಾನಗೊಂಡಿದ್ದ.
ಅವರು ಪುಟ್ಕಾದಲ್ಲಿರುವ ಅವರ ನಿವಾಸಕ್ಕೆ ಬಂದಾಗ, ಹಿತ್ತಲಿನಲ್ಲಿ ರಕ್ತದ ಕಲೆಗಳು, ಸುಟ್ಟ ಜಾಗ ಜತೆಗೆ ಮತ್ತು ಮಾನವ ಮೂಳೆಗಳು ಕಂಡುಬಂದವು. ಪರಿಸ್ಥಿತಿಯಿಂದ ಆತಂಕಗೊಂಡ ಅಮಿತ್ ತಕ್ಷಣ ಸಿಂಗ್ ಪುರ ಪೊಲೀಸ್ ಠಾಣೆಗೆ ತೆರಳಿ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಉದಿತ್ ಭೋಯ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆರಂಭದಲ್ಲಿ ಪೊಲೀಸರಿಗೆ ಅಸ್ಪಷ್ಟ ಉತ್ತರ ನೀಡಿ ದಾರಿತಪ್ಪಿಸಲು ಯತ್ನಿಸಿದ ಆತ ಬಳಿಕ ತಪ್ಪೊಪ್ಪಿಕೊಂಡಿದ್ದಾನೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.