ಅಕ್ರಮ ಹಣ ವರ್ಗಾವಣೆ, ನಿಧಿ ದುರುಪಯೋಗ ಹಾಗೂ ಗಣಿ ಗುತ್ತಿಗೆ ಅಕ್ರಮ ಸಂಬಂಧ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ವಿರುದ್ಧ ಜಾರ್ಖಂಡ್ ಹೈಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.
[ಜಾರ್ಖಂಡ್ ಸರ್ಕಾರ ಮತ್ತು ಶಿವಶಂಕರ್ ಶರ್ಮಾ ನಡುವಣ ಪ್ರಕರಣ].
ಸೊರೇನ್ ಅವರ ವಿರುದ್ಧ ಶಿವಶಂಕರ್ ಶರ್ಮಾ ಎಂಬುವವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಅರ್ಹ ಎಂದಿದ್ದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಯು ಯು ಲಲಿತ್, ಎಸ್ ರವೀಂದ್ರ ಭಟ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ತನ್ನ ಆದೇಶ ಕಾಯ್ದಿರಿಸಿತು.
“ಆದೇಶವನ್ನು ಕಾಯ್ದಿರಿಸಲಾಗಿದೆ. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವುದರಿಂದ ಹೈಕೋರ್ಟ್ ರಿಟ್ ಅರ್ಜಿಗಳ ವಿಚಾರಣೆ ಮುಂದುವರೆಸುವಂತಿಲ್ಲ” ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ.
ಅಕ್ರಮ ಹಣಕಾಸು ವ್ಯವಹಾರದ ವಿಸ್ತೃತ ಸಂಚೊಂದರ ಭಾಗವಾಗಿ ಅಪರಾಧ ನಡೆದಿದೆ ಎಂದು ಪ್ರಕರಣದ ದಾಖಲಿಸದೆ ಇರುವಾಗ ಜಾರಿ ನಿರ್ದೇಶನಾಲಯದ ತನಿಖೆ ಪ್ರಾರಂಭಿಸಲು ಪಿಐಎಲ್ ಮಾರ್ಗ ಅನುಸರಿಸುವುದಕ್ಕೆ ನ್ಯಾಯಾಲಯ ಅಸಮ್ಮತಿಸಿತು .
ಜಾರಿ ನಿರ್ದೇಶನಾಲಯದ (ಇಡಿ) ಮುಚ್ಚಿದ ಲಕೋಟೆ ವರದಿಯನ್ನು ಆಧರಿಸಿ ಜಾರ್ಖಂಡ್ ಹೈಕೋರ್ಟ್ ಸಿಬಿಐ ತನಿಖೆಗೆ ಈ ಹಿಂದೆ ಸೂಚಿಸಿತ್ತು. ಆದರೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. ಇದನ್ನು ತಿರಸ್ಕರಿಸಿದ್ದ ನ್ಯಾಯಾಲಯ ನರೇಗಾ ಹಗರಣಕ್ಕೆ ಸಂಬಂಧಿಸಿದ 16 ಎಫ್ಐಆರ್ಗಳ ವಿವರಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಸರ್ಕಾರ ಈ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಪಿಐಎಲ್ಗಳು ವಿಚಾರಣೆಗೆ ಅರ್ಹವೇ ಎಂಬುದನ್ನು ಮೊದಲೇ ನಿರ್ಧರಿಸಲು ಹೈಕೋರ್ಟ್ಗೆ ಮೇ 24ರಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ವಿಚಾರಣೆಗೆ ಅರ್ಹ ಎಂದು ಜೂನ್ 3ರಂದು ಹೈಕೋರ್ಟ್ ಹೇಳಿತ್ತು. ನಂತರ ರಾಜ್ಯ ಸರ್ಕಾರ ಪ್ರಸ್ತುತ ಮನವಿಯಲ್ಲಿ ಅದರ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿತ್ತು.
“ಪಿಐಎಲ್ನಲ್ಲಿ, ಮಾಹಿತಿಯನ್ನು ಹಂಚಿಕೊಳ್ಳಬಹುದಾಗಿದ್ದು ಕ್ರಿಮಿನಲ್ ಪ್ರಕರಣದಲ್ಲಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಅನುಮತಿಸಬಹುದು” ಎಂದಿರುವ ಸರ್ವೋಚ್ಚ ನ್ಯಾಯಾಲಯ ಪ್ರಕರಣದ ತೀರ್ಪನ್ನು ಕಾಯ್ದಿರಿಸಿದೆ.
ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಜಾರ್ಖಂಡ್ ಸರ್ಕಾರದ ಪರವಾಗಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್, ಮುಖ್ಯಮಂತ್ರಿ ಹೇಮಂತ್ ಸೊರೇನ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟ್ಗಿ ವಾದ ಮಂಡಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.