ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಭ್ರಷ್ಟಾಚಾರಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಾರಂಟ್ ಇಲ್ಲದೇ ಬಂಧಿಸಬಹುದಾಗಿದ್ದು, ಕಾಂಗ್ರೆಸ್ಸಿಗರಲ್ಲಿ ಎದೆ ನಡುಗಲಾರಂಭಿಸಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಭ್ರಷ್ಟಾಚಾರ ಹಾಗೂ ಇ.ಡಿ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ನ ಖಾವೂಂಗಾ, ನ ಖಾನೆ ದೂಂಗಾ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಇನ್ನಷ್ಟು ಬಲ ಬಂದಂತಾಗಿದೆ ಎಂದು ಹೇಳಿದೆ.
ಇಂದಿರಾ ಗಾಂಧಿ ಚುನಾವಣೆ ಗೆದಿದ್ದು ಭ್ರಷ್ಟಾಚಾರದಿಂದಲ್ಲದೇ ಗಾಂಧಿವಾದದಿಂದಲ್ಲ. ಯಂಗ್ ಇಂಡಿಯಾ ಮೂಲಕ ನ್ಯಾಷನಲ್ ಹೆರಾಲ್ಡ್ ಎಂಬ ಬಹುಕೋಟಿ ಹಗರಣದ ಆಶ್ರಯದಾತೆ ಸೋನಿಯಾ. ಇಂಥ ಭ್ರಷ್ಟಾಚಾರಿಗಳ ಬಾಯಲ್ಲೂ ಭ್ರಷ್ಟಾಚಾರ ವಿರೋಧ ಬರುವಂತಾಗಿದ್ದಕ್ಕೆ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಬೇಕು’ ಎಂದು ಬಿಜೆಪಿ ಲೇವಡಿ ಮಾಡಿದೆ.
ತಾನೇ ಚಾಣಕ್ಯ ಎಂಬ ಭ್ರಮೆಯಲ್ಲಿದ್ದ ಡಿ.ಕೆ.ಶಿವಕುಮಾರ್, ಜೈಲಿಗೆ ಹೋಗಿದ್ದು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಯಲ್ಲ. ಇದೇ ಭ್ರಷ್ಟಾಚಾರದಿಂದ. 20 ಬ್ಯಾಂಕಿನಲ್ಲಿ ₹200 ಕೋಟಿ ಹೂತಿಟಿದ್ದು, ಅವರ ಆದಾಯ 800 ಪಟ್ಟು ಹೆಚ್ಚಾಗಿರೋದು ಭ್ರಷ್ಟಾಚಾರದಿಂದ. ಭ್ರಷ್ಟಾಚಾರದ ಬಗ್ಗೆ ಖುದ್ದು ಭ್ರಷ್ಟಾಚಾರಿಯ ಅನುಭವ ಕೇಳುವುದೇ ಚಂದ! ಎಂದು ಕಿಡಿಕಾರಿದೆ.
ನಿಮ್ಮದೇ ಪಕ್ಷದ ಇನ್ನೊಬ್ಬ ಮಹಾಪುರುಷ ಎಂ.ಬಿ.ಪಾಟೀಲ ನೀರಾವರಿ ಸಚಿವರಾಗಿದ್ದಾಗ ಧಾರವಾಡದ ಜನರ ನೀರ ದಾಹದಲ್ಲೂ ದುಡ್ಡು ಹೊಡೆದರು. ಮಲಪ್ರಭಾ ಕಾಲುವೆ ಆಧುನೀಕರಣ ಕಾಮಗಾರಿಯಲ್ಲಿ ₹400 ಕೋಟಿ ಲಪಟಾಯಿಸಿದ್ದು ಭ್ರಷ್ಚಾಚಾರ. ₹159 ಕೋಟಿ ನೀರಾವರಿ ಯೋಜನೆಗಳಿಗೆ ₹25 ಕೋಟಿ ಕಿಕ್ ಬ್ಯಾಕ್ ಪಡೆದಿದ್ದರಂತೆ. ಡಿಕೆಶಿ ಅವರೇ ಅದು ಭಷ್ಟಾಚಾರವಲ್ಲವೆ? ಎಂದು ಪ್ರಶ್ನಿಸಿದೆ.