ಬೆಂಗಳೂರು: ಮದುವೆ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನೊಬ್ಬ ಮಾಗಡಿ ರಸ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ನಿಖಿಲ್ ಬಂಧಿತ ಆರೋಪಿ. ಬಂಧಿತನಿಂದ 1.80 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಯಾರದ್ದೊ ಮದುವೆ ಮನೆಗೆ ಟಿಪ್ ಟಾಪ್ ಆಗಿ ಯಾರಿಗೂ ಅನುಮಾನ ಬಾರದಂತೆ ಬೆಲೆ ಬಾಳುವ ಉಡುಗೆ ಜತೆಗೆ ಎಂಟ್ರಿ ಕೊಡುತ್ತಿದ್ದ. ವಿಶ್ ಮಾಡುವ ನೆಪದಲ್ಲಿ ವಧು ಅಥವಾ ವರರ ರೂಮ್ ಗೆ ತೆರಳುತ್ತಿದ್ದ. ವರ ಅಥವಾ ವಧುವಿನ ಸಂಬಂಧಿಗಳ ಸೋಗಿನಲ್ಲಿ ನೇರವಾಗಿ ಡ್ರೆಸಿಂಗ್ ರೂಮ್ ಗೆ ಹೋಗುತ್ತಿದ್ದ. ಸಮಯ ನೋಡಿಕೊಂಡು ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ. ಈ ಹಿಂದೆ ಇದೇ ರೀತಿ ಕಳ್ಳತನ ನಡೆಸಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿದ್ದ.
ಪಶ್ಚಿಮ ಕಾರ್ಡ್ ರಸ್ತೆಯಲ್ಲಿರುವ ಜಲರಾಂ ಭವನ ಕಲ್ಯಾಣ ಮಂಟಪದಲ್ಲಿ 2023 ನ.28ರಂದು ರಾತ್ರಿ ವಿವಾಹ ಸಮಾರಂಭಕ್ಕೆ ಎಂಟ್ರಿ ಕೊಟ್ಟಿದ್ದ. ಜನಸಂದಣಿ ಇದ್ದ ಸಮಯದಲ್ಲಿ ಮಧುವಿನ ಕೋಣೆಗೆ ನುಗ್ಗಿ 1.81 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಲಪಟಾಯಿಸಿ ಮತ್ತೆ ಹಳೆ ಚಾಳಿ ಮುಂದುವರೆಸಿದ್ದ. ಮಾಗಡಿ ರಸ್ತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.