ಮನೆ ಅಪರಾಧ ಟಾರ್ಗೆಟ್ ಮಾಡಿದ್ದು ತಮ್ಮನನ್ನ ಹಂತಕರ ಕೈಯಲ್ಲಿ ತಗಲಾಕಿಕೊಂಡ ಅಣ್ಣನ ದುರಂತ ಅಂತ್ಯ..!

ಟಾರ್ಗೆಟ್ ಮಾಡಿದ್ದು ತಮ್ಮನನ್ನ ಹಂತಕರ ಕೈಯಲ್ಲಿ ತಗಲಾಕಿಕೊಂಡ ಅಣ್ಣನ ದುರಂತ ಅಂತ್ಯ..!

0

ಮಂಡ್ಯ: ತಮ್ಮನ ಮೇಲಿನ ಸೇಡಿಗೆ ಅಣ್ಣನನ್ನ ಕಿಡ್ಯ್ನಾಪ್ ಮಾಡಿ ಮರ್ಡರ್ ಮಾಡಿರುವ ಆಘಾತಕಾರಿ ಘಟನೆಗೆ ಸಕ್ಕರೆ ನಗರಿ ಮಂಡ್ಯ ಸಾಕ್ಷಿಯಾಗಿದೆ.

Join Our Whatsapp Group

ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ವೆಂಕಟೇಶ್ ಎಂಬಾತನ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು ಬಳಿಕ ಕೊಲೆಗೈದು ಸುಟ್ಟು ಹಾಕಿರುವ ಘಟನೆ ಮಂಡ್ಯ ತಾಲೂಕಿನ ಸಾತನೂರು ಗ್ರಾಮದಲ್ಲಿ ಘಟನೆ.

ಹಣ ಕಾಸಿನ ವಿಚಾರಕ್ಕೆ ತಮ್ಮ ರಮೇಶ್ ಜೊತೆ ರಮೇಶ್ ಸ್ನೇಹಿತರಾದ ಭೀಮೇಶ್ ಹಾಗೂ ವಿನಯ್ ಎಂಬುವವರು ಗಲಾಟೆ ಮಾಡಿದ್ದರು.

ಮೇ 23 ರಂದು ತಡರಾತ್ರಿ ಪೊಲೀಸರೆಂದು ಹೇಳಿಕೊಂಡು ಬಂದಿದ್ದ 6 ಮಂದಿ ಗ್ಯಾಂಗ್ ಮನೆಯಲ್ಲಿ ತಮ್ಮ ರಮೇಶ್ ಇಲ್ಲದ ಕಾರಣ ಅಣ್ಣ ವೆಂಕಟೇಶ್ ನನ್ನು ಅಪಹರಿಸಿದ್ದರು.

ವೆಂಕಟೇಶ್ ನನ್ನು ಅಪಹರಿಸಿ ಹತ್ಯೆಗೈದು ಈರೇಗೌಡನ ಕೊಪ್ಪಲು ಅರಣ್ಯಪ್ರದೇಶದಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು.

ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರಿಗೆ ಅಪಹರಣದ ಕುರಿತು ಪೋಷಕರು ದೂರು ನೀಡಿದ್ದರು. ಆದರೆ ಪೊಲೀಸರು ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು.

ಇದು ಪೋಷಕರ ಕುಟುಂಬದ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಕರಣ ನಡೆದು 13 ದಿನಗಳ ಬಳಿಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಕೈಗೊಂಡ ಮಂಡ್ಯ ಗ್ರಾಮಾಂತರ ಪೊಲೀಸರು ನಾಲ್ವರು ಕೊಲೆ ಪಾತಕಿಗಳನ್ನು ಬಂಧಿಸಿದ್ದಾರೆ.

ಹಿಂದಿನ ಲೇಖನಒಡಿಶಾ ರೈಲು ದುರಂತ: ಸುಪ್ರೀಂ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಕೋರಿ ಸರ್ವೋಚ್ಚ ನ್ಯಾಯಾಲಯಕ್ಕೆ ಪಿಐಎಲ್
ಮುಂದಿನ ಲೇಖನಮಣಿಪುರ ಹಿಂಸಾಚಾರ: ರಾಜ್ಯದಲ್ಲಿ ಅಂತರ್ಜಾಲ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ