ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
ರಾಮ್ ಲಲ್ಲಾನಿಗೆ ನಡೆಯುತ್ತಿದೆ ಅಯೋಧ್ಯೆಯಲ್ಲಿ ಅಭಿಷೇಕ.
ಸ್ಯಾಂಡಲ್ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ…
ಬೋರ್ನ್ವಿಟಾ ಆರೋಗ್ಯಕ್ಕೆ ಹಾನಿಕಾರವೇ ?
BJP ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ ಮೋದಿ ಸರ್ಕಾರ…
ಭಾರತದಲ್ಲಿ ಏರಿಕೆಯಾದ ಶ್ರೀಮಂತರ ಸಂಖ್ಯೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಳಗಾವಿ: ಹಿಂದೂ ಎಂಬ ಪದ ಮೂಲತಃ ಭಾರತದ್ದಲ್ಲ. ಅದು ಪರ್ಷಿಯಾದಿಂದ ಬಂದ ಪದ. ಅಸಲಿಗೆ ಆ ಆಪದಕ್ಕೆ ಅಶ್ಲೀಲವಾದ ಅರ್ಥಗಳಿವೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಕಾರ್ಯಕಾರಿಣಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ, ಬುದ್ಧ ಮತ್ತು ಅಂಬೇಡ್ಕರ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಪದವೆಂದರೆ ಅದು ಕೆಟ್ಟ ಅರ್ಥಗಳನ್ನು ಕೊಡುವಂಥ ಪದವಾಗಿದೆ. ಹಿಂದುತ್ವ ಎಂಬುದು ಪರ್ಷಿಯಾ ಮೂಲದ ಪದವಾಗಿದ್ದು, ಅದಕ್ಕೂ ನಮ್ಮ ಭಾರತಕ್ಕೂ ಏನು ಸಂಬಂಧ ಹೇಳಿ? ನಾವು ಹಿಂದೂಗಳು ಎಂದು ಬೀಗುವ ಇಂದಿನ ಯುವಕರು ತಮ್ಮ ವಾಟ್ಸ್ ಆ್ಯಪ್ ಗಳಲ್ಲಿ, ಗೂಗಲ್ ನಲ್ಲಿ, ವಿಕಿಪೀಡಿಯಾದಲ್ಲಿ ಹಿಂದೂ ಎಂಬ ಪದದ ಅರ್ಥ ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದರು.
ಆ ಪದವನ್ನು ನಮ್ಮ ಮೇಲೆ ಏಕೆ ಬಲವಂತವಾಗಿ ಹೇರಿದರು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಅದರ ನಿಜವಾದ ಅರ್ಥ ಗೊತ್ತಾದಾಗ, ಅವರಿಗೆ ಹಿಂದುತ್ವ ನಮ್ಮದಲ್ಲ ಎಂದು ತಿಳಿಯುತ್ತದೆ. ಆಗ ಅದನ್ನು ಪೂಜ್ಯನೀಯ ಭಾವದಿಂದ ನೋಡುವುದನ್ನು ಬಿಡುತ್ತಾರೆ ಎಂದು ಹೇಳಿದ್ದಾರೆ.
ಆನಂತರ, ತಮ್ಮ ಮಾತುಗಳನ್ನು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡೆಗೆ ತಿರುಗಿಸಿದರು. ನಾವು ಸುಳ್ಳು ಹೇಳುವ ಇಬ್ಬರನ್ನು ಈ ದೇಶದ ನಾಯಕರನ್ನಾಗಿಸಿದ್ದೇವೆ ಎಂದು ಟೀಕಿಸಿದರು.