ಮದ್ದೂರು: ತಾಲೂಕಿನ ವಿವಿಧ ಗ್ರಾಮಗಳ ದೇವಾಲಯಗಳಲ್ಲಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಸಗರಹಳ್ಳಿ ಪೊಲೀಸರು ಬಂಧಿಸಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಚುಂಚೇಗೌಡನದೊಡ್ಡಿ ಗ್ರಾಮದ ದೇವಾಲಯದಲ್ಲಿ ಕಳೆದ ಹಲವು ದಿನಗಳ ಹಿಂದೆ ಕಳವು ಮಾಡಿದ್ದ ಟಿ.ನರಸಿಪುರ ಮೂಲದ ಎನ್. ಮಹೇಶ್, ಎಂ. ಗೋವಿಂದನಾಯಕ ಬಂಧಿತ ಆರೋಪಿಗಳಾಗಿದ್ದು ದೇವರ ವಿಗ್ರಹಮೂರ್ತಿಗೆ ಅಳವಡಿಸಿದ್ದ ಬೆಳ್ಳಿಯ ಮುಖವಾಡ, ಚಿನ್ನದ ಕಾಸುಗಳು, ತಾಳಿ ಇನ್ನಿತರ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು.
ಈ ಸಂಬಂಧ ಚುಂಚೇಗೌಡನದೊಡ್ಡಿ ಗ್ರಾಮದ ಬಿ.ಎಲ್.ನಾಗರಾಜು ಎಂಬುವರು ನೀಡಿದ್ದ ದೂರಿನ ಮೇರೆಗೆ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಸಿಕೊಂಡು ತನಿಖೆ ಕೈಗೊಂಡು ಆರೋಪಿಗಳ ಪತ್ತೆಗೆ ಕ್ರಮವಹಿಸಿದ್ದರು.
ಟಿ.ನರಸೀಪುರ ಗ್ರಾಮದ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಬಳಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ ವೇಳೆ ಕಳವು ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳು ಬೆಸಗರಹಳ್ಳಿ, ಬನ್ನೂರು, ಮಳವಳ್ಳಿ ಗ್ರಾಮಾಂತರ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ಕಳವು ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಆರೋಪಿಗಳಿಂದ ಕಳುವಾಗಿದ್ದ ೧೦೦ ಗ್ರಾಂ. ಚಿನ್ನದ ಆಭರಣಗಳು, ೪ ಕೆ.ಜಿ.ಗೂ ಹೆಚ್ಚು ಬೆಳ್ಳಿ ಪದಾರ್ಥಗಳು, ೨೧ ಸಾವಿರ ರೂ. ನಗದು ಹಾಗೂ ಕಳವು ಮಾಡಲು ಬಳಸುತ್ತಿದ್ದ ೨ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಬಂಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿ. ತಿಮ್ಮಯ್ಯ, ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ ಹಾಗೂ ಬೆಸಗರಹಳ್ಳಿ ಪಿಎಸ್ಐ ಮಲ್ಲಪ್ಪ ಸಂಗಪ್ಪ ಕುಂಬಾರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
ಆರೋಪಿಗಳನ್ನು ಬಂಧಿಸಿರುವ ಬೆಸಗರಹಳ್ಳಿ ಪೊಲೀಸ್ ಸಿಬ್ಬಂದಿಗಳ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.