ಬೆಂಗಳೂರು(Bengaluru): ಎಸಿಬಿ ರದ್ದು ಮಾಡಿದಾಕ್ಷಣ ಲೋಕಾಯುಕ್ತ ಸಂಸ್ಥೆಯಿಂದಲೇ ಎಲ್ಲವೂ ಶುದ್ಧಿಯಾಗಬಹುದೆಂದು ನಾನು ಭಾವಿಸಿಲ್ಲ. ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವ ದಾಖಲೆಗಳನ್ನು ಬೇಕಾದರೂ ನೀಡಬಲ್ಲೆ. ಆದರೆ ಏನು ಪ್ರಯೋಜನ? ಎಸಿಬಿಯ ಭ್ರಷ್ಟಾಚಾರದ ಪವರ್ ಪಾಯಿಂಟ್ ಆಗಿತ್ತು. ಭ್ರಷ್ಟಾಚಾರದ ತಡೆಯುವುದು ಅದರಿಂದ ಸಾಧ್ಯ ಆಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.
ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಏಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ ಎಂದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.