ಮನೆ ರಾಜಕೀಯ ಅಭಿವೃದ್ಧಿ ಶೂನ್ಯ ವ್ಯಕ್ತಿಗಳಿಂದ ಸಿದ್ದರಾಮಯ್ಯರನ್ನು ಟೀಕಿಸುವ ನೈತಿಕ ಹಕ್ಕಿಲ್ಲ: ಎಚ್.ಎ.ವೆಂಕಟೇಶ್

ಅಭಿವೃದ್ಧಿ ಶೂನ್ಯ ವ್ಯಕ್ತಿಗಳಿಂದ ಸಿದ್ದರಾಮಯ್ಯರನ್ನು ಟೀಕಿಸುವ ನೈತಿಕ ಹಕ್ಕಿಲ್ಲ: ಎಚ್.ಎ.ವೆಂಕಟೇಶ್

0

ಮೈಸೂರು(Mysuru): ಅಭಿವೃದ್ಧಿ ಶೂನ್ಯವ್ಯಕ್ತಿಗಳಿಂದ ಅಭಿವೃದ್ಧಿಯ ಭಾಗ್ಯಗಳನ್ನು ಹರಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ನೈತಿಕ ಹಕ್ಕಿಲ್ಲ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರ ಬಗ್ಗೆ ಭಯಬೀತರಾಗಿರುವ ನಳಿನ್‌ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡಿರುವುದು ಹಾಸ್ಯಾಸ್ಪದ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮಾಡಿರುವ ಸಾಧನೆಗಳು,ಅಭಿವೃದ್ಧಿ ಬಗ್ಗೆ ಯಾವುದೇ ಚರ್ಚೆಗೆ ಕಾಂಗ್ರೆಸ್ ಸಿದ್ಧವಿದೆ ಎಂದರು.

ಅಭಿವೃದ್ಧಿ ಕೆಲಸಕ್ಕಿಂತ ಮಾತನಾಡಿಕೊಂಡು ಕಾಲ ಕಳೆಯುತ್ತಿರುವ ನಾಯಕರು  ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.  ಮೊದಲು ತಮ್ಮ ಅವಧಿಯಲ್ಲಿ ಆಗಿರುವ ಸಾಧನೆಗಳನ್ನು ಜನರ ಮುಂದಿಡಲಿ ಎಂದು ಹೆಚ್.ಎ ವೆಂಕಟೇಶ್ ಸವಾಲು ಹಾಕಿದ್ದಾರೆ.

ಡಿ.ದೇವರಾಜ ಅರಸು ನಂತರ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಗೆ ನೀಡಿದ ಕೊಡುಗೆಗಳ ಬಗ್ಗೆ ಜಿಲ್ಲೆಯ ಜನರು ಮಾತನಾಡುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಶಾಶ್ವತವಾದ ಯೋಜನೆಗಳು ಒಂದಾದರೂ ಇದ್ದರೆ ತಿಳಿಸಬೇಕು. ನಳಿನ್‌ಕುಮಾರ್ ಕಟೀಲ್,ಶೋಭಾ, ಸಿ.ಟಿ. ರವಿ. ಪ್ರತಾಪ ಸಿಂಹ ಅವರಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಭಯವಿದೆಯೇ ಹೊರತು ಕಾಂಗ್ರೆಸ್‌ ಗೆ ಭಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಪಿಎಸ್‌ ಐ ನೇಮಕಾತಿ ಅಕ್ರಮಗಳು ಭ್ರಷ್ಟಾಚಾರವನ್ನು ಬಯಲು ಮಾಡಿದೆ. ರಾಜ್ಯದಲ್ಲಿ ಖಾಲಿ ಇರುವ ಎಸ್‌ ಡಿಸಿ,ಎಫ್‌ ಡಿಸಿ, ಡಿ ಗ್ರೂಪ್ ಹುದ್ದೆಗಳನ್ನು ನೇಮಕ ಮಾಡಲು ಮುಂದಾಗದೆ ಹಣ ಮಾಡುವಂತಹ ಇಲಾಖೆಗಳ ಹುದ್ದೆಗಳನ್ನು ನೇಮಕ ಮಾಡುತ್ತಿದ್ದಾರೆ. ಪಿಎಸ್‌ ಐ ನೇಮಕಾತಿಯಲ್ಲಿ ಅನೇಕರು ಭಾಗಿಯಾಗಿರುವುದನ್ನು ಮರೆತಿದ್ದಾರೆ ಎಂದು ಲೇವಡಿ ಮಾಡಿದರು.

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸಚಿವರು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಭಿವೃದ್ಧಿಯ ನೆಪದಲ್ಲಿ ಭೇಟಿ ಮಾಡುತ್ತಿರುವ ಸಚಿವರು ಸರ್ಕಾರಿ ನೌಕರರು, ಪದವೀಧರರ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗಳು ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಸಚಿವರಾದ ಶೋಭಾ ಕರಂದ್ಲಾಜೆ, ಬಿ.ಸಿ.ಪಾಟೀಲ್, ಡಾ.ಸಿ.ಎನ್.ಅಶ್ವಥ್ ನಾರಾಯಣ್,ಎಸ್.ಟಿ.ಸೋಮಶೇಖರ್  ಅವರು ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ಹಾಗಾಗಿ,ಮುಂದಿನ ದಿನಗಳಲ್ಲಿ ಸಚಿವರ ಭೇಟಿಯ ಬಗ್ಗೆ ಗಮನಹರಿಸಬೇಕು ಎಂದು ಹೆಚ್.ಎ ವೆಂಕಟೇಶ್ ಒತ್ತಾಯಿಸಿದ್ದಾರೆ.

ಹಿಂದಿನ ಲೇಖನಮೈಸೂರು: ಕೃಷಿ ಕ್ಷೇತ್ರದಲ್ಲಿ ಬಳಸುವ ಡ್ರೋನ್‌ಗಳ ಪ್ರಾತ್ಯಕ್ಷಿಕೆ
ಮುಂದಿನ ಲೇಖನಜ್ಞಾನವಾಪಿ ಮಸೀದಿ ಸಮೀಕ್ಷೆ: ನ್ಯಾಯಾಲಯ ನೇಮಿಸಿರುವ ಆಯುಕ್ತರ ಸಮೀಕ್ಷಾ ವರದಿ