ಶಿವಮೊಗ್ಗ: ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಈ ಸರ್ಕಾರದಲ್ಲಿ ಅಬಾರ್ಷನ್ ಆಗುವಂತಹ ಲಕ್ಷಣಗಳು ಹೆಚ್ಚಿಗೆ ಕಾಣುತ್ತಿದೆ. ಬರುವ ದಿನಗಳಲ್ಲಿ ಕಾದು ನೋಡಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದಲ್ಲಿ ಗ್ಯಾರಂಟಿ ಒಂದೇ ಹೇಳುತ್ತಿದ್ದಾರೆ. ರೈತರು ಕಣ್ಣಿರಲ್ಲಿ ಕೈ ತೊಳೆಯುತ್ತಿದ್ದಾರೆ. ಲೋಕಸಭಾ ಚುನಾವಣೆಗಾಗಿ ಜನ ಕಾಯುತ್ತಿದ್ದಾರೆ. ಅವರು ಈಗ ಕೊಡುತ್ತಿರುವ ಕಾರ್ಯಕ್ರಮಗಳು ಅಷ್ಟು ಸುಲಭವಾಗಿ ಮುಂದುವರಿಸಿಕೊಂಡು ಹೋಗಲ್ಲ. ಗ್ಯಾರಂಟಿ ಕಾರ್ಯಕ್ರಮಗಳು ಲೋಕಸಭಾ ಚುನಾವಣೆವರೆಗೂ ಮಾತ್ರ ಎಂದರು.
ಧಾರ್ಮಿಕ ಸಭೆಯಲ್ಲಿ ನಮ್ಮ ಸಮಾಜದ ಹಿರಿಯರು ಶಿವಮೊಗ್ಗದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ ನೋಡಿ ಹೇಳಿಕೆ ನೀಡಿದ್ದಾರೆ. ಆಶೀರ್ವಾದ ಮಾಡುವ ಕೆಲಸ ಮಾಡಿದ್ದಾರೆ. ರಾಜಕೀಯವಾಗಿ ಬೇರೆ ಪಕ್ಷದಲ್ಲಿ ಇದ್ದರೂ ನೇರವಾಗಿ ಮಾತನಾಡಿದ್ದಾರೆ. ಇದು ನನ್ನ ಪೂರ್ವ ಜನ್ಮದ ಫಲ. ನಾನು ಅರ್ಥ ಮಾಡಿಕೊಂಡಿದ್ದು, ಏನೆಂದರೆ ಯಾವುದೇ ವ್ಯಕ್ತಿ ಯಾವುದೇ ಪಕ್ಷ ಆದರೂ ಅವರು ಮಾಡಿದ ಒಳ್ಳೆ ಕೆಲಸ ನೋಡಿ ಸ್ಮರಣೆ ಮಾಡಬೇಕು. ಶಾಮನೂರು ಅವರು ನೇರ ನುಡಿಗೆ ಹೆಸರಾದವರು. ಎಲ್ಲರ ಅಪೇಕ್ಷೆಯಂತೆ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಮಾಡುತ್ತೇನೆ. ಕಾಂಗ್ರೆಸ್ ಶಾಸಕರು ಎನ್ನುವುದಕ್ಕಿಂತ ಒಳ್ಳೆಯ ಕೆಲಸಕ್ಕೆ ಒಳ್ಳೆಯದನ್ನ ಮಾತನಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ಬಿಜೆಪಿ ಎಂದು ಅನಿಸಲ್ಲ ನನಗೆ ಎಂದು ರಾಘವೇಂದ್ರ ಹೇಳಿದರು.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.