ಮಂಡ್ಯ: ‘ನನ್ನ ರಾಜಕೀಯ ಜೀವನ ಜೆಡಿಎಸ್ನಲ್ಲೇ ಆರಂಭವಾಗಿದ್ದು, ಅಲ್ಲಿಯೇ ಕೊನೆಯಾಗಲಿದೆ. ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ’ ಎಂದು ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಸುದ್ದಿಗಾರರೊಡನೆ ಶುಕ್ರವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ವಿಷಯವನ್ನು ಎಚ್.ಡಿ.ದೇವೇಗೌಡ ಅವರಿಗೆ ತಿಳಿಸಿದ್ದೆ. ನನ್ನ ಕ್ಷೇತ್ರದ ಡಿಂಕಾ ಮಲ್ಲಿಗೆರೆ ಗ್ರಾಮದಲ್ಲಿ ಕುರುಬ ಸಮುದಾಯ ಪ್ರಬಲವಾಗಿದೆ. ಅಲ್ಲಿ ಸಿದ್ದರಾಮೇಶ್ವರ ದೇವಾಲಯದ ಉದ್ಘಾಟನೆಗೆ ಆಹ್ವಾನಿಸಲು ತೆರಳಿದ್ದೆ’ ಎಂದರು.
Advertisement

ಅಷ್ಟಕ್ಕೇ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಸುದ್ದಿ ಹರಡಿದ್ದಾರೆ. 1978ರಲ್ಲಿ ಜನತಾ ಪಕ್ಷದಿಂದ ರಾಜಕಾರಣಕ್ಕೆ ಬಂದೆ. ಇಂದಿನವರೆಗೂ ಪಕ್ಷ ಬಿಡುವ ಬಗ್ಗೆ ಯೋಚಿಸಿಲ್ಲ’ ಎಂದರು.