ಮನೆ ರಾಜ್ಯ ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಗೆ ಪತ್ರ ಬರೆಯುತ್ತೇವೆ: ಗಿರಿಧರ್

ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಗೆ ಪತ್ರ ಬರೆಯುತ್ತೇವೆ: ಗಿರಿಧರ್

0

ಮೈಸೂರು: ಪ್ರತಾಪ್ ಸಿಂಹನಿಂದಲೇ ಈ ಬಾರಿ ವಿಧಾನಸಭಾ ಚುನಾವಣೆ ಸೋತಿದ್ದು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಕೊಡಬಾರದೆಂದು ಹೈ ಕಮಾಂಡ್ ಗೆ ಪತ್ರ ಬರೆಯುತ್ತೇವೆ ಎಂದು ಬಿಜೆಪಿ ಎಸ್ ಸಿ ಮೋರ್ಚಾದ ಗಿರಿಧರ್ ಹೇಳಿದರು.

ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಮುಖಂಡ ಗಿರಿಧರ್, ಮೈಸೂರಿನಲ್ಲಿ ಪ್ರತಾಪ್ ಸಿಂಹ ಹಠಾವ್ ಎಂಬ ಚಳವಳಿ ಮಾಡುತ್ತೇವೆ. ಪ್ರತಾಪ್ ಸಿಂಹ ಒನ್ ಮ್ಯಾನ್ ಶೋ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.

ಚಾಮುಂಡಿ ಬೆಟ್ಟ ಚಲೋ ವಿಚಾರವಾಗಿ ಪಕ್ಷದ ಯಾವುದೇ ಹಿರಿಯರು ಕಾರ್ಯಕರ್ತರ ಹಾಗೂ ಮುಖಂಡರ ಜೊತೆ  ಚರ್ಚಿಸದೆ ಏಕಾಂಗಿಯಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಶಾಸಕ ಶ್ರೀವತ್ಸ ಅವರು ಪ್ರತಾಪ್ ಸಿಂಹ ಅವರ ಒತ್ತಡಕ್ಕೆ ಮಣಿದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಯಾವುದೇ ಅಭಿವೃದ್ಧಿ ಕೆಲಸಗಳು ಇಲ್ಲದ ಕಾರಣ ಮಹಿಷಾ ದಸರಾ ಮುಂದಿಟ್ಟುಕೊಂಡು ರಾಜಕೀಯ ಮಾಡುತಿದ್ದಾರೆ. ಪ್ರತಾಪ್ ಸಿಂಹರ ಈ ನಡೆ ದಲಿತ ಸಮುದಾಯದ ವಿರೋಧ ವ್ಯಕ್ತಪಡಿಸುತ್ತಿದೆ. ಇದರಿಂದ ಇದು ಮುಂಬರುವ ಚುನಾವಣೆಗೆ ಸಾಕಷ್ಟು ತೊಂದರೆ ಉಂಟಾಗುತ್ತದೆ ಎಂದು ಕಿಡಿಕಾರಿದರು.

ಕಷ್ಟಪಟ್ಟು ಕಟ್ಟಿರುವ ಪಕ್ಷವನ್ನು ಪ್ರತಾಪ್ ಸಿಂಹ ಹಾಳು ಮಾಡುತಿದ್ದಾರೆ. ಒಂದು ವೇಳೆ ಸಂಘರ್ಷವಾಗಿ ಕಾರ್ಯಕರ್ತರಿಗೆ ಏನಾದರೂ ಆದರೆ ಪ್ರತಾಪ್ ಸಿಂಹನೇ ಹೊಣೆ. ಬಿಜೆಪಿ ಎಂದರೆ ಪ್ರತಾಪ್ ಸಿಂಹರದ್ದಾ..? ಎಂದು ಪ್ರಶ್ನಿಸಿದರು.

ಹಿಂದಿನ ಲೇಖನಮಹಿಷ ದಸರಾ ಆಚರಣೆ ಮಾಡೇ ಮಾಡುತ್ತೇವೆ: ಪುರುಷೋತ್ತಮ್
ಮುಂದಿನ ಲೇಖನಮಂಡ್ಯ: ಮನೆ ಬಾಗಿಲು ಮುರಿದು, ಚಿನ್ನಾಭರಣ ದೋಚಿದ ಕಳ್ಳರು