ಮನೆ ರಾಜಕೀಯ ಸತ್ಯದ ಪರ ಧ್ವನಿ ಎತ್ತಿದವರನ್ನು ಜೈಲಿಗೆ ಹಾಕಲಾಗುತ್ತಿದೆ: ರಾಹುಲ್ ಗಾಂಧಿ

ಸತ್ಯದ ಪರ ಧ್ವನಿ ಎತ್ತಿದವರನ್ನು ಜೈಲಿಗೆ ಹಾಕಲಾಗುತ್ತಿದೆ: ರಾಹುಲ್ ಗಾಂಧಿ

0

ನವದೆಹಲಿ(New Delhi): ಯಾರಾದರೂ ಸರ್ವಾಧಿಕಾರದ ವಿರುದ್ಧ ಮಾತನಾಡಿದರೆ ಅವರ ವಿರುದ್ಧ ಆಕ್ರಮಣ ಮಾಡಲಾಗುತ್ತದೆ. ಸತ್ಯದ ಪರ ಧ್ವನಿ ಎತ್ತಿದವರನ್ನ ಥಳಿಸಿ, ಬಂಧಿಸಿ, ಜೈಲಿಗೆ ಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ನೀತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಹುಲ್​ ಗಾಂಧಿ ತುರ್ತು ಸುದ್ದಿಗೋಷ್ಠಿ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಆರಂಭವಾಗಿರುವ ಸರ್ವಾಧಿಕಾರ ಕಲ್ಪನೆಯ ವಿರುದ್ಧ ಧ್ವನಿ ಎತ್ತಿದವರಿಗೆ ಶಿಕ್ಷೆ ನೀಡಲಾಗುತ್ತಿದೆ. ಪ್ರಜಾಪ್ರಭುತ್ವದ ಸಾವಿಗೆ ನಾವು ಸಾಕ್ಷಿಯಾಗುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಸುಮಾರು ಒಂದು ಶತಮಾನದಿಂದ ಇಕ್ಕಟ್ಟಿನ ವಾತಾವರಣವಿದೆ. ಬಡವರು, ಮಧ್ಯಮ ವರ್ಗದವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜನರ ಸಮಸ್ಯೆಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಸಮಾಜದಲ್ಲಿ ನಡೆಯುತ್ತಿರುವ ಹಿಂಸೆ ಕುರಿತು ಯಾರೂ ಧ್ವನಿ ಎತ್ತಬಾರದು. ಕೇಂದ್ರ ಸರ್ಕಾರ ದೊಡ್ಡ ಉದ್ಯಮಿಗಳ ಹಿತಾಸಕ್ತಿ ಕಾಪಾಡಲು ಮಾತ್ರ ಆಸಕ್ತಿ ತೋರುತ್ತಿದೆ. 4-5 ಜನರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದಲೇ ಸರ್ಕಾರ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇಂದು ದೇಶಾದ್ಯಂತ ಕಾಂಗ್ರೆಸ್​ ಪ್ರತಿಭಟನೆ: ಬೆಲೆ ಏರಿಕೆ, ನಿರುದ್ಯೋಗ ಮತ್ತು ಜಿಎಸ್‌ಟಿ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಿದ್ದಾರೆ. ರಾಹುಲ್​ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧ ಇಡಿ ದಾಳಿ, ತನಿಖೆ ತೀವ್ರಗೊಳಿಸಿದೆ. ಕೇಂದ್ರ ಸರ್ಕಾರದ ಈ ನೀತಿ ವಿರುದ್ಧ ಕಾಂಗ್ರೆಸ್​ ಸಿಡಿದೆದ್ದಿದೆ.