ಮನೆ ರಾಜ್ಯ ಟಿಕಾಯತ್‌ ಮೇಲೆ ಹಲ್ಲೆ ಪ್ರಕರಣ: ಮೂವರ ಬಂಧನ

ಟಿಕಾಯತ್‌ ಮೇಲೆ ಹಲ್ಲೆ ಪ್ರಕರಣ: ಮೂವರ ಬಂಧನ

0

ಬೆಂಗಳೂರು (Bengaluru)-ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮುಖಕ್ಕೆ ಕಪ್ಪು ಮಸಿ ಎರಚಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು,ರೈತ ಮುಖಂಡನ ಮೇಲೆ ಪತ್ರಕರ್ತರ ಸೋಗಿನಲ್ಲಿ ಬಂದು ಮಸಿ ಹಾಕಿದ್ದಾರೆ. ಅವರು ಯಾವ ಪಕ್ಷದವರೇ ಆದರೂ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾವ ಪಕ್ಷದವರು ಕೂಡ ಇಂತಹ ಕೃತ್ಯ ಮಾಡಲು ಹೇಳಲ್ಲ. ಯಾರೆ ಆದ್ರೂ ಕೂಡ ಬಂಧನ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇನ್ನು ಪಠ್ಯ ವಿಚಾರ ಮರೆಮಾಚಲು ಈ ಪ್ರಕರಣ ಅಂತ ಡಿಕೆಶಿ ಆರೋಪ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಬರ್ತಾ ಇದೆ. ಹಾಗಾಗಿ ಕಾಂಗ್ರೆಸ್ ಆರೋಪ ‌ಮಾಡ್ತಾ ಇದೆ. ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿದೆ. ಜನರು ಪಕ್ಷ ಬಿಟ್ಟು ಹೊಗ್ತಾ ಇದ್ದಾರೆ. ಡಿ.ಕೆ.ಶಿವಕುಮಾರ್ ಮಾತಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ ಎಂದರು.

ಹಿಂದಿನ ಲೇಖನರಾಜ್ಯದಲ್ಲಿ 166 ಮಂದಿಗೆ ಕೋವಿಡ್ ಪಾಸಿಟಿವ್
ಮುಂದಿನ ಲೇಖನಅವಂತಿಪೋರಾದಲ್ಲಿ ಎನ್‌ ಕೌಂಟರ್‌ ಇಬ್ಬರು ಉಗ್ರರ ಹತ್ಯೆ