ಮನೆ ರಾಜಕೀಯ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ: ಇಂತಹ ನಡವಳಿಕೆ ಸಹಿಸಲ್ಲ ಎಂದ ಬಿಎಸ್’ವೈ

ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ: ಇಂತಹ ನಡವಳಿಕೆ ಸಹಿಸಲ್ಲ ಎಂದ ಬಿಎಸ್’ವೈ

0

ಬೆಂಗಳೂರು(Bengaluru):  ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ. ಇಂತಹ ನಡೆವಳಿಕೆಯನ್ನು ಸಹಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಸಿದ್ಧರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ ಇಂಥ ಘಟನೆ ನಡೆಯಬಾರದು. ಸಿದ್ದರಾಮಯ್ಯ ವಿಪಕ್ಷ ನಾಯಕರಿದ್ದಾರೆ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಘಟನೆಯನ್ನು ಖಂಡಿಸಿದರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ,  ವಿಪಕ್ಷ ನಾಯಕರಿಗೆ ಭದ್ರತೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.  ಕೊಡಗಿನ ನೆರೆ ಹಾನಿ ವೀಕ್ಷಣೆಗೆ ತೆರಳಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಈ ಸಮಯದಲ್ಲಿ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು.

ಹಿಂದಿನ ಲೇಖನಐಟಿಬಿಪಿಯಲ್ಲಿ ಕಾನ್ಸ್‌’ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
ಮುಂದಿನ ಲೇಖನರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ: ಸಿದ್ದರಾಮಯ್ಯ ಆರೋಪ