ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹುಣಸೂರು(Hunsur): ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜ.27 ರಿಂದ ಫೆ.6 ರವರೆಗೆ ಎಂಟು ದಿನಗಳ ಕಾಲ ಹುಲಿಗಣತಿ ಕಾರ್ಯ ನಡೆಯಲಿದೆ.
ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕಳೆದ ಬಾರಿ ನಡೆಸಿದ್ದ ಹುಲಿ ಗಣತಿ ಕಾರ್ಯದ ಅಂಕಿ ಅಂಶ ಈವರೆಗೂ ಬಿಡುಗಡೆಯಾಗದಿದ್ದರೂ ಮತ್ತೆ ಈಗ ಗಣತಿ ಕಾರ್ಯಾರಂಭವಾಗಿರುವುದು ಹಲವು ಚರ್ಚೆಗೆ ಅಡಿಪಾಯ ಹಾಕಿದಂತಾಗಿದೆ.
ಗುರುವಾರದಂದು ವೀರನಹೊಸಹಳ್ಳಿ ವಲಯ ಕಚೇರಿಯಲ್ಲಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಾಗರಹೊಳೆ ಹುಲಿಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದರ ನೇತೃತ್ವದಲ್ಲಿ ಬೆಂಗಳೂರಿನ ಟೈಗರ್’ಸೆಲ್’ನ ವಿನಯ್ ಹಾಗೂ ಡಿಆರ್’ಎಫ್’ಓ ನಂದನ್ ತರಬೇತಿ ನೀಡಿದ್ದಾರೆ.
ಈ ವೇಳೆ ಮಾಹಿತಿ ನೀಡಿದ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷ ಕುಮಾರ್ ಚಿಕ್ಕನರಗುಂದರವರು ಮೊದಲ ಮೂರು ದಿನ ಮಾಂಸಹಾರಿ ಹಾಗೂ ದೊಡ್ಡ ಪ್ರಾಣಿಗಳ ಸಮೀಕ್ಷೆ ನಡೆಸಿ ಎಕಾಲಾಜಿಕಲ್ ಆ್ಯಪ್ನ’ಲ್ಲಿ ದಾಖಲಿಸಲು ಸೂಚನೆ ನೀಡಿದ್ದಾರೆ.
ನಂತರ ಮೂರು ದಿನ ಲೈನ್ ಟ್ರಾಂಜ್ಯಾಕ್ಟ್ ಮೂಲಕ ಪ್ರತಿ ಬೀಟ್ನಲ್ಲಿ ಸುಮಾರು 1-2 ಕಿ.ಮೀ ವರೆಗೆ ಸಸ್ಯಹಾರಿ ಪ್ರಾಣಿಗಳ ಸರ್ವೆ, ಮರಗಿಡ, ಗಿಡಮೂಲಿಕೆ ಸಸ್ಯ ಪ್ರಬೇಧಗಳ ಮಾಹಿತಿ ಸಂಗ್ರಹಣೆ, ಸಸ್ಯಹಾರಿ ಪ್ರಾಣಿಗಳ ಹಿಕ್ಕೆಗಳ ಪರಿವೀಕ್ಷಣೆ ನಡೆಸಲಾಗುವುದು.
ಏಳನೇ ದಿನ ರಣಹದ್ದುಗಳ ಸಮೀಕ್ಷೆ ನಡೆಸಲಾಗುವುದು. ಕೊನೆಯ ದಿನ ಸಮಗ್ರ ಮಾಹಿತಿಯನ್ನು ಕ್ರೋಡೀಕರಿಸಿ ಇಲಾಖೆಗೆ ಸಲ್ಲಿಸುವಂತೆ ಸೂಚಿಸಿದರು.
ಉದ್ಯಾನದ 8 ವಲಯಗಳ 91 ಬೀಟ್’ನಲ್ಲಿ ಗಣತಿ ಕಾರ್ಯ ನಡೆಯಲಿದ್ದು, ಗಣತಿ ಕಾರ್ಯದಲ್ಲಿ ಸಂಪೂರ್ಣ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ತೊಡಗಿಸಿಕೊಳ್ಳಲಿದ್ದಾರೆ. ಯಾವುದೇ ಸ್ವಯಂ ಸೇವಕರನ್ನು ಈ ಕಾರ್ಯಕ್ಕೆ ಬಳಸಿಕೊಂಡಿಲ್ಲವೆಂದು ಡಿಸಿಎಫ್ ಮಾಹಿತಿ ನೀಡಿದ್ದಾರೆ.