ಮೈಸೂರು (Mysuru)- ಬೇಸಿಗೆ ರಜೆ ಇರುವ ಪ್ರಯುಕ್ತ ಹೆಚ್ಚಿನ ಜನರು ಬರುವ ನಿರೀಕ್ಷೆಯಿರುವುದರಿಂದ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಇಂದು (ಮೇ 24) ವಾರದ ರಜೆ ಇಲ್ಲ. ಹೀಗಾಗಿ ಮೈಸೂರು ಮೃಗಾಲಯ ಎಂದಿನಂತೆ ಕಾರ್ಯನಿರ್ವಹಿಸಲಿದೆ.
ರಜೆ ಹಿನ್ನೆಲೆಯಲ್ಲಿ ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಅನುಕೂಲವಾಗುವಂತೆ ಮಂಗಳವಾರದಂದು ಮೃಗಾಲಯ ಹಾಗೂ ಕಾರಂಜಿ ಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗಿದೆ ಎಂದು ಮೃಗಾಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೃಗಾಲಯಕ್ಕೆ ಪ್ರತಿ ಮಂಗಳವಾರ ರಜೆ ಇರುತ್ತಿತ್ತು. ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುತ್ತದೆ. ಹೀಗಾಗಿ ಮಂಗಳವಾರ ರಜೆಯನ್ನು ರದ್ದುಗೊಳಿಸಲಾಗಿದೆ.