ಮನೆ ಕಾನೂನು ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮಸ್ಕಿ ಪೊಲೀಸ್​ ಠಾಣೆ ಪಿಎಸ್ ​​ಐ ಮಣಿಕಂಠ ಅಮಾನತು

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮಸ್ಕಿ ಪೊಲೀಸ್​ ಠಾಣೆ ಪಿಎಸ್ ​​ಐ ಮಣಿಕಂಠ ಅಮಾನತು

0

ರಾಯಚೂರು: ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ಪೊಲೀಸ್​ ಠಾಣೆ ಪಿಎಸ್​​ಐ ಮಣಿಕಂಠ ಅವರನ್ನು ಅಮಾನತು ಮಾಡಿ ಬಳ್ಳಾರಿ ವಲಯದ ಐಜಿ ಲೋಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Join Our Whatsapp Group

ಅಕ್ರಮ ಮರಳು ಸಾಗಾಟ ಆರೋಪದ ಮೇಲೆ ಟ್ರ್ಯಾಕ್ಟರ್​ ಚಾಲಕ ನಿರುಪಾದಿ ಎನ್ನುವರಿಗೆ ಮನಬಂದಂತೆ ಬಾಸುಂಡೆ ಬರುವಂತೆ ಥಳಿಸಿದ್ದರು. ಈ ಬಗ್ಗೆ ನಿರುಪಾದಿ ಪತ್ನಿ ಲಕ್ಷ್ಮೀ ನೀಡಿದ್ದ ದೂರಿನ ಅನ್ವಯ ಮಣಿಕಂಠ ವಿರುದ್ಧ ಮಸ್ಕಿ ಠಾಣೆಯಲ್ಲೇ ಎಫ್ ​ಐಆರ್ ದಾಖಲಾಗಿತ್ತು. ಅಲ್ಲದೇ ವಾಲ್ಮೀಕಿ ಸಂಘ, ಮಣಿಕಂಠ ಅವರನ್ನು ಅಮಾನತು ಮಾಡುವಂತೆ ಠಾಣೆ ಮುಂದೆ ಪ್ರತಿಭಟನೆ ಮಾಡಿತ್ತು. ಇದೀಗ ಈ ಪ್ರಕರಣದಲ್ಲಿ ಪಿಎಸ್​ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ.

ಸೆಪ್ಟೆಂಬರ್ 20 ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್ ​ನಲ್ಲಿ ಮರಳು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್​ ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮರಳು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಅಲ್ಲದೇ ತನ್ನ ಜೀಪ್​ ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದರು. ಹಾಗೇ ಪಿಎಸ್ ​ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿತ್ತು. ಹೀಗಾಗಿ ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ವಾಲ್ಮೀಕಿ ನಾಯಕ ಮಾಹಾಸಭಾ ತಾಲೂಕು ಘಟಕವು ಪಿಎಸ್ ​ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಂಗಸೂರು ಡಿವೈಎ ಸ್​​ಪಿ ಮಂಜುನಾಥ ಹಾಗೂ ಸಿಪಿಐ ಬಾಲಚಂದ್ರ ಲಕ್ಕಂ ಅವರಿಗೆ ಮನವಿ ಸಲ್ಲಿಸಿದ್ದರು.

ಹಿಂದಿನ ಲೇಖನಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಾರಿಗೆ  ಕಿವುಡ, ಮೂಗ ವಕೀಲೆಯ ವಾದ ಮಂಡನೆ: ಹೊಸ ಇತಿಹಾಸ
ಮುಂದಿನ ಲೇಖನನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿಯಾಗುತ್ತಿದ್ದರೆ ಈ ಟ್ರಿಕ್ ಫಾಲೋ ಮಾಡಿ