ಮನೆ ರಾಜ್ಯ ಬಸ್‌ನಲ್ಲೇ ಬಿಟ್ಟು ಹೋಗಿದ್ದ ಹಣವನ್ನು ಪ್ರಯಾಣಿಕನಿಗೆ ಮರಳಿಸಿದ ಸಾರಿಗೆ ಸಿಬ್ಬಂದಿ

ಬಸ್‌ನಲ್ಲೇ ಬಿಟ್ಟು ಹೋಗಿದ್ದ ಹಣವನ್ನು ಪ್ರಯಾಣಿಕನಿಗೆ ಮರಳಿಸಿದ ಸಾರಿಗೆ ಸಿಬ್ಬಂದಿ

0

ಬೀದರ್ : ಪ್ರಯಾಣ ಮಾಡುವಾಗ ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60 ಲಕ್ಷ ಹಣವನ್ನು ಪ್ರಯಾಣಿಕನಿಗೆ ಮರಳಿ ನೀಡಿ ಕಂಡಕ್ಟರ್ ಮತ್ತು ಚಾಲಕ ಮಾನವೀಯತೆ ಮೆರೆದ ಘಟನೆ ಬೀದರ್‌ನಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾಟಸಾಂಗ್ವಿ ಗ್ರಾಮದ ಬಳಿ ಈ ಘಟನೆ ನಡೆದಿದೆ. 1.60 ಲಕ್ಷ ರೂ. ಬಸ್‌ನಲ್ಲೇ ಬಿಟ್ಟು ಹೋದ ವಿಷಯ ತಿಳಿದು ಕರ್ತವ್ಯ ನಿರತ ಸಾರಿಗೆ ಬಸ್ ನಿರ್ವಾಹಕರಾದ ಸಿದ್ರಾಮ್ ಮತ್ತು ಚಾಲಕರಾದ ಹನೀಪ್ ಗ್ರಾಮಕ್ಕೆ ಹೋಗಿ ಹಣದ ಚೀಲ ಮರಳಿಸಿ ಮಾನವೀಯತೆ ಮೆರೆದಿದ್ದಾರೆ.

ಗ್ರಾಮಕ್ಕೆ ತೆರಳಿ ವಯೋವೃದ್ಧನಿಗೆ ಹಣ ವಾಪಸ್ ನೀಡಿದ ನಿರ್ವಾಹಕ ಮತ್ತು ಚಾಲಕನ ಪ್ರಾಮಾಣಿಕತೆಗೆ ಜಿಲ್ಲೆಯ ಜನರು ಶ್ಲಾಘಿಸಿದ್ದಾರೆ.