ಮನೆ ರಾಷ್ಟ್ರೀಯ ತ್ರಿಪುರ ಚುನಾವಣೆ: ನಿರ್ಭೀತಿಯಿಂದ ಮತ ಚಲಾಯಿಸುವಂತೆ ಮಲ್ಲಿಕಾರ್ಜುನ ಖರ್ಗೆ ಕರೆ

ತ್ರಿಪುರ ಚುನಾವಣೆ: ನಿರ್ಭೀತಿಯಿಂದ ಮತ ಚಲಾಯಿಸುವಂತೆ ಮಲ್ಲಿಕಾರ್ಜುನ ಖರ್ಗೆ ಕರೆ

0

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಿ ಎಂದು ತ್ರಿಪುರಾ ಜನರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಗೆ ಇಂದು (ಫೆಬ್ರುವರಿ 16) ಮತದಾನ ನಡೆಯುತ್ತಿದೆ. ರಾಜ್ಯದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮಾರ್ಚ್‌ 2ರಂದು ಮತ ಎಣಿಕೆ ನಡೆಯಲಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಖರ್ಗೆ, ತ್ರಿಪುರಾದ ಜನರು ಬದಲಾವಣೆಗಾಗಿ ಒಂದಾಗಿದ್ದಾರೆ. ಪ್ರತಿಯೊಬ್ಬರು, ವಿಶೇಷವಾಗಿ ಯುವಕರು ಹೊರಬಂದು ಪ್ರಜಾಪ್ರಭುತ್ವದ ಉತ್ಸವದಲ್ಲಿ ಭಾಗವಹಿಸಿ. ಶಾಂತಿ ಮತ್ತು ಪ್ರಗತಿಗಾಗಿ ಪ್ರಾಮಾಣಿಕವಾಗಿ ಮತ ಚಲಾಯಿಸಿ. ನಿರ್ಭೀತಿಯಿಂದ ಮತ ಚಲಾಯಿಸಿ ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನಶಿವರಾತ್ರಿ ಜಾತ್ರೆ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಿಗೆ ನಿರ್ಬಂಧ
ಮುಂದಿನ ಲೇಖನಟಿಪ್ಪು ಸುಲ್ತಾನ್ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು: ಅಶ್ವತ್ಥ ನಾರಾಯಣ್​​