ಮನೆ ಅಪರಾಧ ತ್ರಿಪುರ ಸುಂದರಿ ದೇಗುಲ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ, ಚಿನ್ನಾಭರಣ ಜಪ್ತಿ

ತ್ರಿಪುರ ಸುಂದರಿ ದೇಗುಲ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ, ಚಿನ್ನಾಭರಣ ಜಪ್ತಿ

0

ಚಾಮರಾಜನಗರ(Chamarajanagara): ತಿ.ನರಸೀಪುರ ತಾಲೂಕಿನ ಮೂಗೂರು ತ್ರಿಪುರ ಸುಂದರಿ ದೇವಾಲಯದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಿಶೇಷ ತಂಡ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಸಿನಿಮಾ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಚಾಮರಾಜನಗರದಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಅಲೆಮಾರಿ ಜನಾಂಗದವರಂತೆ ವೇಷ ಹಾಕಿಕೊಂಡು ಬಿಸಲವಾಡಿ ಗ್ರಾಮದ ಊರ ಹೊರಗೆ ಟೆಂಟ್ ಹಾಕಿಕೊಂಡು ವಾಸಿಸುತ್ತಿದ್ದರು. ಈ ಬಗ್ಗೆ ಖಚಿತ ಮೇರೆಗೆ ಮೈಸೂರಿನ ವಿಶೇಷ ಪೊಲೀಸ್​ ತಂಡ ದಾಳಿ ಮಾಡಿದ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಅಲ್ಲದೇ, ಕೆರೆ ದಂಡೆ ಹಾಗೂ ಪೊದೆಗಳಲ್ಲಿ ಅಡಗಿಸಿಟ್ಟಿದ್ದ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮೂಗೂರು ತ್ರಿಪುರ ಸುಂದರಿ ದೇವಾಲಯ ಸೇರಿದಂತೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ದೇಗುಲ ಕಳವು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಬ್ಯವಾಗಿದೆ.

ಹೆಚ್ಚಿನ ತನಿಖೆಗಾಗಿ ಬಂಧಿತರನ್ನು ಮೈಸೂರು ಪೊಲೀಸರು ಕರೆದೊಯ್ದಿದ್ದಾರೆ.

ಹಿಂದಿನ ಲೇಖನಅಕ್ರಮ ಗಣಿಗಾರಿಕೆ ತಡೆಯಲು ಮುಂದಾದ ಪೊಲೀಸ್ ಅಧಿಕಾರಿ ಮೇಲೆ ಲಾರಿ ಹರಿಸಿ ಹತ್ಯೆ
ಮುಂದಿನ ಲೇಖನಭಾವನಾತ್ಮಕ ಸ್ವಾತಂತ್ರ್ಯದಿಂದ ಸಂತೃಪ್ತಿ