ಮೈಸೂರು(Mysuru): ಜಾತಿ–ಆದಾಯ ಪ್ರಮಾಣಪತ್ರ, ವಿದ್ಯಾರ್ಥಿವೇತನ ಪಡೆಯುವಲ್ಲಿ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು. ಪ್ರತ್ಯೇಕ ಸ್ಮಶಾನ ಭೂಮಿ ಒದಗಿಸಬೇಕು. ಸೌಲಭ್ಯಕ್ಕಾಗಿ ಅಲೆದಾಡಿಸಬಾರದು ಎಂಬಿತ್ಯಾದಿ ಬೇಡಿಕೆಗಳನ್ನು ಅಲ್ಪಸಂಖ್ಯಾತರು ಅಧಿಕಾರಿಗಳ ಮುಂದಿಟ್ಟರು.
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ನಗರದ ಜಿ.ಪಂ ಸಭಾಂಗಣದಲ್ಲಿ ಬುಧವಾರ ನಡೆಸಿದ ‘ಅಲ್ಪಸಂಖ್ಯಾತ ಸಮುದಾಯದ ಮುಖಂಡರೊಂದಿಗೆ ಕೋಮು ಸೌಹಾರ್ದ ಸಭೆ’ಯಲ್ಲಿ ಹಲವು ಕುಂದುಕೊರತೆಗಳನ್ನು ಮಂಡಿಸಿದ ಅಲ್ಪಸಂಖ್ಯಾತರು ಅವುಗಳನ್ನು ಪರಿಹರಿಸುವಂತೆ ಆಗ್ರಹಿಸಿದರು.
ಜೈನ ಸಮುದಾಯದ ಮುಖಂಡ ಸುರೇಶ್ಕುಮಾರ್ ಜೈನ್ ಮಾತನಾಡಿ, ಜೈನರಲ್ಲಿ ದಿಗಂಬರ ಹಾಗೂ ಶ್ವೇತಾಂಬರರಲ್ಲಿ ಉಪಜಾತಿಗಳಿವೆ. ಆದರೆ, ಅದು ನಮೂದಾಗುತ್ತಿಲ್ಲ. ಆದ್ದರಿಂದ, ಜನಗಣತಿ ನಮೂನೆಯಲ್ಲೇ ಉಪ ಜಾತಿಗಳನ್ನು ನಮೂದಿಸಬೇಕು. ದಿಗಂಬರ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮೈಸೂರಿನಲ್ಲಿ ಜೈನರಿಗೆ ಪ್ರತ್ಯೇಕ ಸ್ಮಶಾನ ಭೂಮಿ ಇಲ್ಲ. ಸರ್ಕಾರದಿಂದ ಜಾಗ ಒದಗಿಸಿದರೆ, ಸಮಾಜದಿಂದಲೇ ನಿರ್ವಹಣೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಜೈನರ ಬಸದಿ, ದೇವಸ್ಥಾನ ಮೊದಲಾದ ಆಸ್ತಿಗಳ ಗಡಿ ಸಮೀಕ್ಷೆ ನಡೆಸಬೇಕು. ಎಷ್ಟೋ ಜಾಗಗಳು ನಮಗೇ ಸೇರಿದ್ದರೂ ಬಹುಸಂಖ್ಯಾತರ ಮುಂದೆ ನಾವು ಮಾತನಾಡಲಾಗದ ಸ್ಥಿತಿ ಇದೆ. ಚಾಮುಂಡಿಬೆಟ್ಟದ ದೇವಸ್ಥಾನ ಜೈನರಿಗೆ ಸೇರಿದ್ದು. ಹೀಗೆ ಅನೇಕ ನಿದರ್ಶನಗಳಿವೆ ಎಂದರು.
ಪ್ರತಿಕ್ರಿಯಿಸಿದ ಅಧ್ಯಕ್ಷ ಅಜೀಂ, ಜನಗಣತಿ ನಮೂನೆಯಲ್ಲಿ ಉಪ ಜಾತಿ ನಮೂದಿಸುವಂತೆ ಸೂಚಿಸಲಾಗುವುದು. ಸ್ಮಶಾನಗಳಿಗೆ ಜಾಗ ಕೊಡಬೇಕು. ಇಲ್ಲದಿದ್ದರೆ ಖರೀದಿಸಿಕೊಡಬೇಕು ಎಂದು ತಹಶೀಲ್ದಾರ್ಗಳಿಗೆ ಸರ್ಕಾರ ಆದೇಶಿಸಿದೆ. ಬಸದಿಗಳ ಗಡಿ ಸಮೀಕ್ಷೆಗೂ ಸೂಚಿಸಲಾಗಿದೆ ಎಂದು ತಿಳಿಸಿದರು.
ಮೈಸೂರಿನ ಗುರುದ್ವಾರದಲ್ಲಿ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು ಎಂದು ಸಿಖ್ ಮುಖಂಡರು ಕೋರಿದರು.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.