ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ಇಂದು ಎರಡೂ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.
ಇದರ ಬೆನ್ನಲ್ಲೇ ಮತ್ತೊಂದೆಡೆ ಕಲಬುರಗಿಯಲ್ಲಿ ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ ಸಂಭವಿಸಿದೆ.
ಕಲಬುರಗಿ ಬಳಿಯ ಗೊಬ್ಬೂರ್(ಬಿ) ಗ್ರಾಮದ ಬಳಿ ಟಿಟಿ, ಲಾರಿ ಮತ್ತು ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 29 ವರ್ಷದ ಅನೂಪ್ ಮಾಧವ್, ವಿನುತಾ(54) ಹಾಗೂ ಬಸವರಾಜ್(33) ಮೃತ ದುರ್ವೈವಿಗಳು.
ಗಾಣಗಾಪುರದ ದತ್ತನ ದರ್ಶನ ಮುಗಿಸಿಕೊಂಡು ಕಲಬುರಗಿಗೆ ಬರುತ್ತಿದ್ದ ಟಿಟಿ ವಾಹನದ ಟೈರ್ ಬ್ಲಾಸ್ಟ್ ಆಗಿ ಚವಡಾಪುರದ ಕಡೆಗೆ ಕಬ್ಬು ತುಂಬಿಕೊಂಡು ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಹಾಗೇ ಬೈಕ್ಗೂ ಸಹ ಗುದ್ದಿದೆ ಪರಿಣಾಮ. ಮೂವರು ಮೃತಪಟ್ಟಿದ್ದಾರೆ
ಮೃತ ವಿನೂತಾ ಹಾಗೂ ಅನೂಪ್ ಮಾಧವ್ ಕಲಬುರಗಿಯ ಸ್ಟೇಷನ್ ಬಜಾರ್ ಏರಿಯಾದ ನಿವಾಸಿಗಳಾಗಿದ್ದರೆ, ಮೃತ ಬೈಕ್ ಸವಾರ ಬಸವರಾಜ್ ಗೊಬ್ಬೂರ್ (ಬಿ) ಗ್ರಾಮದ ನಿವಾಸಿಯಾಗಿದ್ದಾರೆ.
ಇನ್ನು ಟಿಟಿಯಲ್ಲಿದ್ದ ಉಳಿದ ಏಳು ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಣಗಾಪುರದ ದತ್ತನ ದರ್ಶನ ಮುಗಿಸಿಕೊಂಡು ಕಲಬುರಗಿಗೆ ಬರುತ್ತಿದ್ದ ಟಿಟಿ ವಾಹನದ ಟೈರ್ ಬ್ಲಾಸ್ಟ್ ಆಗಿದ್ದರಿಂದ ಈ ದುರಂತ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಟಿಟಿ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಲಬುರಗಿ ಎಸ್ ಪಿ ಅಡ್ಡೂರು ಶ್ರೀನಿವಾಸಲು ದೌಡಾಯಿಸಿ ಪರಿಶೀಲನೆ ನಡೆಸಿದರು.














