ಮನೆ ಅಪರಾಧ ತುಮಕೂರು: ಸಾಲ ತೀರಿಸಲಾಗದೆ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ

ತುಮಕೂರು: ಸಾಲ ತೀರಿಸಲಾಗದೆ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ

0

ತುಮಕೂರು: ಸಾಲ ತೀರಿಸಲಾಗದೆ ಚಿಕ್ಕಮ್ಮ ಮಗಳನ್ನು ಮಾರಾಟ ಮಾಡಿರುವ ಘಟನೆ ಆಂಧ್ರ ಪ್ರದೇಶದ ಹಿಂದೂಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Join Our Whatsapp Group

ಬಾಲಕಿ ತಾಯಿ ಚೌಡಮ್ಮ ತುಮಕೂರು ನಗರದ ದಿಬ್ಬೂರದಲ್ಲಿ ವಾಸಿಸುತ್ತಿದ್ದಾಳೆ. ಚೌಡಮ್ಮ ತನ್ನ ಮಗಳನ್ನು ತಂಗಿ ಸುಜಾತಾ ವಾಸವಿದ್ದ ಹಿಂದೂಪುರದ ಮನೆಗೆ ಕಳುಹಿಸಿದ್ದಳು. ಹಿಂದೂಪುರ ಚೌಡಮ್ಮ ಮತ್ತು ಸುಜಾತಾರ ತವರು ಮನೆಯಾಗಿದೆ. ಸುಜಾತಾ ಹಿಂದೂಪುರದಲ್ಲಿ ಶೀರಾಮುಲು ಎಂಬುವರ ಬಳಿ ಸಾಲ ಮಾಡಿದ್ದಳು.

ಈ ಸಾಲ ತೀರಿಸಲಾಗದೆ ಚಿಕ್ಕಮ್ಮ ಸುಜಾತಾ ಬಾಲಕಿಯನ್ನು ಶ್ರೀರಾಮುಲುಗೆ 35 ಸಾವಿರ ರೂ.ಗೆ ಮಾರಾಟ ಮಾಡಿದ್ದಳು. ಶ್ರೀರಾಮುಲು ಬಾಲಕಿಯನ್ನು ಬಾತುಕೋಳಿ ಮೇಯಿಸಲು ಇರಿಸಿಕೊಂಡಿದ್ದನು. ಬಾಲಕಿ ಕರೆತರಲು ಚೌಡಮ್ಮ ಹಿಂದೂಪುರಕ್ಕೆ ಹೋದಾಗ ವಿಷಯ ತಿಳಿದಿದೆ. ಬಳಿಕ, ಚೌಡಮ್ಮ ತನ್ನ ಪುತ್ರಿಯನ್ನು ಕಳಿಸಿಕೊಡುವಂತೆ ಶ್ರೀರಾಮುಲು ಬಳಿ ಮನವಿ ಮಾಡಿಕೊಂಡಿದ್ದಾರೆ.

ಈ ವೇಳೆ ಶ್ರೀರಾಮುಲು ಬಾಲಕಿಯನ್ನು ಖರೀದಿಸಿದ್ದು, ಸಾಲದ ಹಣ ಕೊಟ್ಟು ಕರೆದೊಯ್ಯುವಂತೆ ಹೇಳಿದ್ದಾರೆ. ನಂತರ ಬಾಲಕಿಯ ತಾಯಿ ಚೌಡಮ್ಮ ತುಮಕೂರಿಗೆ ಬಂದು, ಮಗಳ ಸ್ಥಿತಿಯ ಬಗ್ಗೆ ಕಾರ್ಮಿಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಕಾರ್ಮಿಕ ಅಧಿಕಾರಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಕೂಡಲೆ ತುಮಕೂರು ಪೊಲೀಸರು ಹಿಂದೂಪುರಕ್ಕೆ ಹೋಗಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಬಾಲಕಿಯನ್ನು ಜಿಲ್ಲಾ ಬಾಲ‌ ಮಂದಿರದಲ್ಲಿ ಇರಿಸಲಾಗಿದೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ.