ಮನೆ ಸುದ್ದಿ ಜಾಲ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರುಪಾಲು

ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರುಪಾಲು

0

ಮೈಸೂರು: ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ  ಟಿ. ನರಸೀಪುರ ತಾಲ್ಲೂಕಿನ ತಲಕಾಡಿನ ತ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.

Join Our Whatsapp Group

ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರಾದ ಲೋಹಿತ್(15), ಯತೀಶ್(13) ಮೃತಪಟ್ಟ ಬಾಲಕರು.

ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಆಗಮಿಸಿದ್ದ ಬಾಲಕರು, ಈಜಲು ನದಿಗೆ ಇಳಿದಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನು ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ. ಮಕ್ಕಳ ಮೃತದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಕುರಿತು ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಹಾರಿದ ಡೆಲಿವರಿ ಏಜೆಂಟ್
ಮುಂದಿನ ಲೇಖನ2022ನೇ ಸಾಲಿನ ಯುಪಿಎಸ್​’ಸಿ ಪರೀಕ್ಷೆ ಫಲಿತಾಂಶ ಪ್ರಕಟ