ಮನೆ ರಾಜ್ಯ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆ ಸಾವು

0

ಸಿದ್ದಾಪುರ (ಕೊಡಗು): ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ನೆಲ್ಯಹುದಿಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ಕೋಣೇರಿರ ಪ್ರಕಾಶ್ ಹಾಗೂ ಸುಮನ್ ಚಂಗಪ್ಪ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದುಹೋಗಿವೆ. ವಿದ್ಯುತ್ ತಂತಿ ಮೇಲೆ ಮರದ ಕೊಂಬೆ ಬಿದ್ದಿದ್ದರಿಂದ ತಂತಿ ಕೆಳಕ್ಕೆ ಬಾಗಿವೆ‌. ತೋಟದಲ್ಲಿ ಕಾಡಾನೆಗಳು ಹಾದು ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿದೆ.

ಇದರಿಂದಾಗಿ ಗಂಡು ಕಾಡಾನೆ ಹಾಗೂ ಒಂದು ಹೆಣ್ಣಾನೆ ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ‌ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಹಿಂದಿನ ಲೇಖನಆಟೋ-ಕಾರು ನಡುವೆ ಭೀಕರ ಅಪಘಾತ: ಮಹಿಳೆ ಸಾವು
ಮುಂದಿನ ಲೇಖನಗೊರೂರು ಜಲಾಶಯಕ್ಕೆ ಸಚಿವ ಗೋಪಾಲಯ್ಯ ಬಾಗಿನ ಅರ್ಪಣೆ