ಮನೆ ಅಪರಾಧ ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು

0

ಕಲಬುರಗಿ: ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದ ಬಳಿಯಿರುವ ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲಾದ ಘಟನೆ ನಡೆದಿದೆ.

Join Our Whatsapp Group

ಭೂಮಿಕಾ ದೊಡ್ಮನಿ(8) ಹಾಗೂ ಶ್ರಾವಣಿ ನಾಟೀಕಾರ(11) ನೀರುಪಾಲಾದವರು. ಇಂದು ನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಬಾಲಕಿಯರು, ಬಟ್ಟೆ ತೊಳೆದ ನಂತರ ನದಿಯಲ್ಲಿ ಈಜಾಡಲು ಮುಂದಾಗಿದ್ದರು.

ಈ ವೇಳೆ ನದಿ ನೀರಿನ ರಭಸಕ್ಕೆ ಭೂಮಿಕಾ ದೊಡ್ಡಮನಿ ಕೊಚ್ಚಿ ಹೋಗಿದ್ದಾರೆ. ಕೂಡಲೇ ಭೂಮಿಕಾ ರಕ್ಷಿಸಲು ಶ್ರಾವಣಿ‌ ಮುಂದಾಗಿದ್ದಳು. ಆದರೆ, ದುರಾದೃಷ್ಟವಶಾತ್​ ಇಬ್ಬರು ಬಾಲಕಿಯರು ಕೊಚ್ಚಿ ಹೋಗಿದ್ದಾರೆ. ಸಧ್ಯ ಚಿಂಚೋಳಿ ಗ್ರಾಮದ ಶ್ರಾವಣಿ ನಾಟೀಕಾರ್(11) ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಭೂಮಿಕಾ ದೊಡ್ಮನಿ ಶವಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ.

ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.