ವಿಜಯಪುರ: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸಲು ತೆರಳುತ್ತಿದ್ದ ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ಇಬ್ಬರು ಯಾತ್ರಾರ್ಥಿಗಳು ಸೋಮವಾರ ತಡರಾತ್ರಿ ನಡೆದ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
ಗುಜರಾತ್ ನ ಪೋರಬಂದರ್ ಸಮೀಪ ನಿಂತಿದ್ದ ಟಿಪ್ಪರ್ ಗೆ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಮತ್ತು ಮಲ್ಲಿಕಾರ್ಜುನ ಸದ್ದಲಗಿ (40) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಚಾಲಕ ಸಮೇತ ಒಟ್ಟು 12 ಮಂದಿ ಟಿಟಿಯಲ್ಲಿ ಚಡಚಣ ದಿಂದ ಪ್ರಯಾಗರಾಜ್ ಗೆ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ನಾಲ್ವರಿಗೆ ತೀವ್ರ ಗಾಯವಾಗಿದ್ದು, ಗುಜರಾತ್ ನ ಪೋರಬಂದರ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.














