ಬೆಂಗಳೂರು(Bengaluru): ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಯಿತು.
ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ನಿಗದಿತ ಅವಧಿಗೆ ಮೃತದೇಹದ ಏರ್ ಲಿಫ್ಟ್ ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಹುಟ್ಟೂರಿನಲ್ಲಿ ಅಂತಿಮ ದರ್ಶನದ ವ್ಯವಸ್ಥೆಯಲ್ಲೂ ವ್ಯತ್ಯಯವಾಗುವಂತಾಗಿದೆ.
ಬೆಳಗ್ಗೆ 7 ಗಂಟೆಗೆ ಏರ್ ಆಂಬ್ಯುಲೆನ್ಸ್ ಮೂಲಕ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ಕೊಂಡೊಯ್ಯುವ ನಿರ್ಧಾರ ಮಾಡಲಾಗಿತ್ತು. ಆದರೆ ಏರ್ ಲಿಫ್ಟ್ ಮಾಡಲು ಆಂಬ್ಯುಲೆನ್ಸ್ ವ್ಯವಸ್ಥೆ ಇರುವ ವಿಮಾನ ಚೆನ್ನೈನಿಂದ ಬರುವುದಕ್ಕೆ ಮಳೆ ಅಡ್ಡಿಯಾಯಿತು. ಹಾಗಾಗಿ ಹೈದರಾಬಾದ್ನಿಂದ ವಿಶೇಷ ವಿಮಾನವನ್ನು ತರಿಸಿಕೊಳ್ಳಲಾಯಿತು.
ಮಧ್ಯಾಹ್ನ 12.30 ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ಇರಿಸಿ ಬೆಳಗಾವಿಯತ್ತ ಪಾರ್ಥಿವ ಶರೀರವನ್ನು ರವಾನಿಸಲಾಯಿತು. ಕತ್ತಿ ಅವರ ಕುಟುಂಬ ಸದಸ್ಯರು ಈ ವಿಶೇಷ ವಿಮಾನದಲ್ಲಿ ತೆರಳಿದರು. ಮಧ್ಯಾಹ್ನ 1.30 ರ ವೇಳೆಗೆ ಬೆಳಗಾವಿಗೆ ವಿಮಾನ ತಲುಪಲಿದೆ.
ಪಾರ್ಥಿವ ಶರೀರವನ್ನು ರವಾನಿಸುವ ಮುನ್ನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಗೌರವ ಸಲ್ಲಿಸಲಾಯಿತು.
ಸಚಿವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಉಮೇಶ್ ಕತ್ತಿಯವರ ಅಂತ್ಯಸಂಸ್ಕಾರ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಿನಲ್ಲಿ ನಡೆಯಲಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.