ಮನೆ ರಾಜ್ಯ ಸಾಲಬಾಧೆ ತಾಳಲಾರದೇ ರೈತ ಮಹಿಳೆ ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ರೈತ ಮಹಿಳೆ ಆತ್ಮಹತ್ಯೆ

0

ಚಿಕ್ಕಮಗಳೂರು: ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕು ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆ ಹನುಮಮ್ಮ(75) ಎಂದು ಗುರುತಿಸಲಾಗಿದ್ದು, ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಕೆನರಾ ಬ್ಯಾಂಕ್ ನಲ್ಲಿ ಆರು ಲಕ್ಷ ರೂ. ಸಾಲ ಪಡೆದಿದ್ದರು.

ಮಳೆ ಕೊರತೆಯಿಂದ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಮುಂದಿನ ಲೇಖನಪದೇ ಪದೇ ಕೇಸು ಮುಂದೂಡಿಕೆಗೆ ಇನ್ನು ಮುಂದೆ ಅವಕಾಶವಿಲ್ಲ