ನವದೆಹಲಿ: 2022-2023ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದ್ದು, ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಇಂದು ಬೆಳಿಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತಮ್ಮ ತಂಡದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಬಳಿಕ ನಿರ್ಮಲಾ ಸೀತಾರಾಮನ್ ಹಾಗೂ ಹಣಕಾಸು ಇಲಾಖೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕರದ್ ಅವರು ಅಲ್ಲಿಂದ ಸಂಪುಟ ಸಭೆಗೆ ತೆರಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಜೆಟ್’ಗೆ ಅನುಮೋದನೆ ಪಡೆದುಕೊಳ್ಳಲಾಯಿತು.
ಹಣಕಾಸು ಸಚಿವೆಯಾದ ಬಳಿಕ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡುತ್ತಿರುವ ನಾಲ್ಕನೇ ಬಜೆಟ್ ಇದಾಗಿದೆ.